ಸಾಂದರ್ಭಿಕ ಚಿತ್ರ 
ರಾಜ್ಯ

ಕೆಜಿಎಫ್ ನಲ್ಲಿ ಸರಣಿ ಅಪಘಾತ: ಮೂವರು ಸಾವು, ಹಲವು ಮಂದಿಗೆ ಗಾಯ

ಐಚರ್ ಟೆಂಪೋ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದು, ನಂತರ ಸೇವೆಗಾಗಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಆಂಬ್ಯುಲೆನ್ಸ್‌ಗೆ ಡಿಕ್ಕಿ ಹೊಡೆದಿದೆ.

ಕೋಲಾರ: ಬಂಗಾರಪೇಟೆ ಪೊಲೀಸ್ ವ್ಯಾಪ್ತಿಯ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಸೋಮವಾರ ಸಂಜೆ ಕಲ್ಕೆರೆ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಸುಮಾರು 19 ಮಂದಿ ಗಾಯಗೊಂಡಿದ್ದಾರೆ.

ಐಚರ್ ಟೆಂಪೋ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದು, ನಂತರ ಸೇವೆಗಾಗಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಆಂಬ್ಯುಲೆನ್ಸ್‌ಗೆ ಡಿಕ್ಕಿ ಹೊಡೆದಿದೆ.

ಟೆಂಪೋದಲ್ಲಿ ಬೆಂಗಳೂರಿನ ಎಸ್​​ಕೆಸಿ ಕ್ಯಾಟರಿಂಟ್​​ನ 15 ಜನ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸುಮಾರು 19 ಮಂದಿಗೆ ಗಾಯಗಳಾಗಿವೆ ಎಂದು ಎಸ್​ಪಿ ಶಿವಾಂಶು ರಜಪೂತ್ ತಿಳಿಸಿದ್ದಾರೆ. ಆಂಬ್ಯುಲೆನ್ಸ್ ಚಾಲಕ ವಿಕ್ರಮ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಟೆಂಪೋದಲ್ಲಿದ್ದ ಇತರ ಇಬ್ಬರು ಸಹ ಸಾವನ್ನಪ್ಪಿದ್ದು ಅವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೆಜಿಎಫ್, ಬಂಗಾರಪೇಟೆ, ಕೋಲಾರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಟೆಂಪೋದಲ್ಲಿದ್ದ ಪ್ರಯಾಣಿಕರು ಖಾಸಗಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಅಡುಗೆ ಕೆಲಸ ಮಾಡುವವರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

4 ಲಕ್ಷ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯವಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಗುಡುಗಿದ ಭಾರತ

ನನ್ನ ಸೂಚನೆ ಪರಿಣಾಮಕಾರಿಯಾಗಿತ್ತು, ಹೀಗಾಗಿ ಯುದ್ಧ ನಿಲ್ಲಿಸಿದರು: ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಪುನರುಚ್ಛಾರ

ಪರಿಶಿಷ್ಟ ಜಾತಿಯವರು ಬೌದ್ಧ ಧರ್ಮಕ್ಕೆ ಮತಾಂತರ ಆದ್ರು 'SC ಜಾತಿ ಪ್ರಮಾಣಪತ್ರ': ರಾಜ್ಯ ಸರ್ಕಾರದ ಆದೇಶ!

Uttar Pradesh: ರಾತ್ರಿ ಹೊತ್ತಲ್ಲಿ 'ಹಾವಾಗಿ' ಕಚ್ಚಲು ಓಡಾಡಿಸುವ ಪತ್ನಿ: ಅಧಿಕಾರಿಗಳ ದುಂಬಾಲು ಬಿದ್ದ ಪತಿ!

CJI ಮೇಲೆ 'ಶೂ' ಎಸೆತ: ಯಾವುದೇ ಪಶ್ಚಾತ್ತಾಪವಿಲ್ಲ, ನಾನು ಮಾಡಿದ್ದು ಸರಿಯಿದೆ ಎಂದ ವಕೀಲ ರಾಕೇಶ್ ಕಿಶೋರ್

SCROLL FOR NEXT