ಸಾಂದರ್ಭಿಕ ಚಿತ್ರ 
ರಾಜ್ಯ

ಕೆಜಿಎಫ್ ನಲ್ಲಿ ಸರಣಿ ಅಪಘಾತ: ಮೂವರು ಸಾವು, ಹಲವು ಮಂದಿಗೆ ಗಾಯ

ಐಚರ್ ಟೆಂಪೋ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದು, ನಂತರ ಸೇವೆಗಾಗಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಆಂಬ್ಯುಲೆನ್ಸ್‌ಗೆ ಡಿಕ್ಕಿ ಹೊಡೆದಿದೆ.

ಕೋಲಾರ: ಬಂಗಾರಪೇಟೆ ಪೊಲೀಸ್ ವ್ಯಾಪ್ತಿಯ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಸೋಮವಾರ ಸಂಜೆ ಕಲ್ಕೆರೆ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಸುಮಾರು 19 ಮಂದಿ ಗಾಯಗೊಂಡಿದ್ದಾರೆ.

ಐಚರ್ ಟೆಂಪೋ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮತ್ತೊಂದು ಟೆಂಪೋಗೆ ಡಿಕ್ಕಿ ಹೊಡೆದಿದ್ದು, ನಂತರ ಸೇವೆಗಾಗಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಆಂಬ್ಯುಲೆನ್ಸ್‌ಗೆ ಡಿಕ್ಕಿ ಹೊಡೆದಿದೆ.

ಟೆಂಪೋದಲ್ಲಿ ಬೆಂಗಳೂರಿನ ಎಸ್​​ಕೆಸಿ ಕ್ಯಾಟರಿಂಟ್​​ನ 15 ಜನ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸುಮಾರು 19 ಮಂದಿಗೆ ಗಾಯಗಳಾಗಿವೆ ಎಂದು ಎಸ್​ಪಿ ಶಿವಾಂಶು ರಜಪೂತ್ ತಿಳಿಸಿದ್ದಾರೆ. ಆಂಬ್ಯುಲೆನ್ಸ್ ಚಾಲಕ ವಿಕ್ರಮ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಟೆಂಪೋದಲ್ಲಿದ್ದ ಇತರ ಇಬ್ಬರು ಸಹ ಸಾವನ್ನಪ್ಪಿದ್ದು ಅವರ ಗುರುತು ಇನ್ನೂ ಪತ್ತೆಯಾಗಿಲ್ಲ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೆಜಿಎಫ್, ಬಂಗಾರಪೇಟೆ, ಕೋಲಾರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಟೆಂಪೋದಲ್ಲಿದ್ದ ಪ್ರಯಾಣಿಕರು ಖಾಸಗಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಅಡುಗೆ ಕೆಲಸ ಮಾಡುವವರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್