ಸಂಗ್ರಹ ಚಿತ್ರ 
ರಾಜ್ಯ

ನೀರು ಕೊಡಲು ನಿರಾಕರಿಸಿದ ಪತ್ನಿಯ ಮೇಲೆ ಲಟ್ಟಣಿಗೆಯಿಂದ ಹಲ್ಲೆ: ಕೋಮಾಗೆ ಜಾರಿದ್ದ ಪತ್ನಿ ದುರಂತ ಸಾವು

ಛೋಟೆಲಾಲ್ ಸಿಂಗ್ ಹಾಗೂ ಪ್ರೀತಿ ಸಿಂಗ್ ಇಬ್ಬರೂ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಸೆ.24 ರಂದು ಕುಡಿದು ಮನೆಗೆ ಬಂದ ಛೋಟೆಲಾಲ್ ಹೆಂಡತಿ ಬಳಿ ನೀರು ಕೇಳಿದ್ದಾನೆ.

ಬೆಂಗಳೂರು: ಕುಡಿಯಲು ನೀರು ಕೊಡಲಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವ ಘಟನೆ ಪೀಣ್ಯದ ಬಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ.

ಮಧ್ಯಪ್ರದೇಶ ಮೂಲದ ಪ್ರೀತಿ ಸಿಂಗ್( 26) ಮೃತ ಮಹಿಳೆ. ಆರೋಪಿಯನ್ನು ಛೋಟೆಲಾಲ್ ಸಿಂಗ್ ಎಂದು ಗುರ್ತಿಸಲಾಗಿದೆ. ಸೆಪ್ಟೆಂಬರ್ 24 ರಂದು ಪೀಣ್ಯ ಪೊಲೀಸ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಕ್ಟೋಬರ್ 2ರಂದು ಮಹಿಳೆ ಸಾವನ್ನಪ್ಪಿದ್ದಾರೆ.

ಛೋಟೆಲಾಲ್ ಸಿಂಗ್ ಹಾಗೂ ಪ್ರೀತಿ ಸಿಂಗ್ ಇಬ್ಬರೂ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಸೆ.24 ರಂದು ಕುಡಿದು ಮನೆಗೆ ಬಂದ ಛೋಟೆಲಾಲ್ ಹೆಂಡತಿ ಬಳಿ ನೀರು ಕೇಳಿದ್ದಾನೆ. ಈ ವೇಳೆ ಪ್ರೀತಿ ಸಿಂಗ್ ಅವರು, ನಾನು ಕೆಲಸಕ್ಕೆ ಹೋಗ್ಬೇಕು, ನೀನೇ ನೀರು ತಗೊಂಡು ಕುಡಿ ಎಂದು ಹೇಳಿದ್ದಾಳೆಂದು ತಿಳಿದುಬಂದಿದೆ.

ಇದರಿಂದ ಕೋಪಗೊಂಡ ಛೋಟೆಲಾಲ್ ಸಿಂಗ್, ಲಟ್ಟಣಿಗೆಯಿಂದ ಪತ್ನಿಯ ತಲೆಗೆ ಹೊಡೆದಿದ್ದಾನೆ. ಈ ವೇಳೆ ಗಂಭೀರ ಗಾಯಗೊಂಡ ಪ್ರೀತಿ ಅಲ್ಲೇ ಕೋಮಾಗೆ ಜಾರಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೂಡ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳ, ಯುಪಿ, ಇತರ ರಾಜ್ಯಗಳಲ್ಲಿ SIR ವಿರುದ್ಧ ಹೊಸ ಅರ್ಜಿ: EC ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

'ಕೈ ಇಟ್ಟಲೆಲ್ಲಾ ದುಡ್ಡೋ ದುಡ್ಡು..': ಕರ್ನಾಟಕದಿಂದ ಕೇರಳಕ್ಕೆ ಹಣ ಕಳ್ಳಸಾಗಣೆ, 3.15 ಕೋಟಿ ರೂ. ನಗದು ಕಸ್ಟಮ್ಸ್ ವಶಕ್ಕೆ! Video

ಕೇರಳ: ಮದುವೆ ದಿನವೇ ಅಪಘಾತ, ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವಧುವಿಗೆ ಆಸ್ಪತ್ರೆಯಲ್ಲಿಯೇ ತಾಳಿ ಕಟ್ಟಿದ ವರ!

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪನ: ಕನಿಷ್ಠ 6 ಸಾವು, ಕೋಲ್ಕತಾ ಸೇರಿ ಭಾರತದ ಹಲವೆಡೆ ಕಂಪಿಸಿದ ಭೂಮಿ, Video

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

SCROLL FOR NEXT