ಡಿಕೆ ಶಿವಕುಮಾರ್ 
ರಾಜ್ಯ

ಗ್ರೇಟರ್‌ ಬೆಂಗಳೂರು ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಟಿಕೆಟ್‌: ಡಿಕೆ ಶಿವಕುಮಾರ್ ಘೋಷಣೆ

ಪಂಚಾಯತ್‌ನಿಂದ ಸಂಸತ್ತಿನವರೆಗೆ, ನಮಗೆ ಹೆಚ್ಚಿನ ಮಹಿಳಾ ನಾಯಕಿಯರು ಬೇಕು. ಅವರು ಕುಟುಂಬಗಳಲ್ಲಿ ನಿರ್ಧಾರ ತೆಗೆದುಕೊಳ್ಳುವವರು ಅವರು ಆಡಳಿತದ ಭಾಗವಾಗಿರಬೇಕು ಎಂದು ಶಿವಕುಮಾರ್ ಒತ್ತಿ ಹೇಳಿದರು.

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪಾಲಿಕೆ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಶೇಕಡಾ 50ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡಲಾಗುತ್ತದೆ. ಆ ಮೂಲಕ ಮುಂದಿನ ದಿನಗಳಲ್ಲಿ ಬೆಂಗಳೂರಿನ ಪಾಲಿಕೆಗಳಲ್ಲಿ ಅರ್ಧದಷ್ಟು ಮಹಿಳಾ ಕಾರ್ಪೊರೇಟರ್ ಗಳು ಇರುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಪಂಚಾಯತ್‌ನಿಂದ ಸಂಸತ್ತಿನವರೆಗೆ, ನಮಗೆ ಹೆಚ್ಚಿನ ಮಹಿಳಾ ನಾಯಕಿಯರು ಬೇಕು. ಅವರು ಕುಟುಂಬಗಳಲ್ಲಿ ನಿರ್ಧಾರ ತೆಗೆದುಕೊಳ್ಳುವವರು ಅವರು ಆಡಳಿತದ ಭಾಗವಾಗಿರಬೇಕು ಎಂದು ಶಿವಕುಮಾರ್ ಒತ್ತಿ ಹೇಳಿದರು.

ಮೌಂಟ್ ಕಾರ್ಮೆಲ್ ಕಾಲೇಜಿನ ಸಹಯೋಗದೊಂದಿಗೆ ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿಪಿಎಸಿ) ಆಯೋಜಿಸಿದ್ದ ಜಿಬಿಎ: ಟ್ರಾನ್ಸ್‌ಫಾರ್ಮೇಟಿವ್ ವಿಷನ್ ಫಾರ್ ಬೆಂಗಳೂರು ವಿತ್ ಜಿಬಿಎ ಕುರಿತು ಪ್ಯಾನಲ್ ಚರ್ಚೆಯಲ್ಲಿ ಡಿಕೆ ಶಿವಕುಮಾರ್ ಮಾತನಾಡಿದರು. ಮೂಲಸೌಕರ್ಯ, ತ್ಯಾಜ್ಯ ನಿರ್ವಹಣೆ, ಚಲನಶೀಲತೆ ಮತ್ತು ಸೇವಾ ವಿತರಣಾ ಸುಧಾರಣೆಗಳಿಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ ಶಿವಕುಮಾರ್, ಬೆಂಗಳೂರು 198 ವಾರ್ಡ್ ಗಳೊಂದಿಗೆ ದೊಡ್ಡ ಪ್ರಮಾಣದಲ್ಲಿತ್ತು. ಎಲ್ಲಾ ವಾರ್ಡ್ ಗಳನ್ನು ನಿರ್ವಹಣೆ ಮಾಡಲು ಕೇವಲ ಒಬ್ಬರೇ ಆಯುಕ್ತರಿದ್ದರು. ಒಬ್ಬರಿಂದ ಇಷ್ಟೆಲ್ಲಾ ನಿರ್ವಹಣೆ ಕಷ್ಟ. ಮುಂದಿನ 10-15 ವರ್ಷಗಳಲ್ಲಿ ಬೆಂಗಳೂರಿನ ಜನಸಂಖ್ಯೆ 2 ಕೋಟಿ ತಲುಪಲಿದೆ. ಹೀಗಾಗಿ ಅದನ್ನು 369 ವಾರ್ಡ್‌ಗಳನ್ನಾಗಿ ಮಾಡುತ್ತೇವೆ.

104-ಕಿಮೀ ಬೆಂಗಳೂರು ವ್ಯಾಪಾರ ಕಾರಿಡಾರ್ ಅನ್ನು ನಾವು ಶೀಘ್ರದಲ್ಲೇ ತ್ವರಿತಗೊಳಿಸುತ್ತೇವೆ. ನಗರದಾದ್ಯಂತ ಎತ್ತರದ ಕಾರಿಡಾರ್‌ಗಳು, ಸುರಂಗಗಳು ಮತ್ತು ರಸ್ತೆ ಯೋಜನೆಗಳನ್ನು ವೇಗಗೊಳಿಸುತ್ತೇವೆ. ಎಲ್ಲಾ ಬೆಂಗಳೂರಿಗರು, ವಿಶೇಷವಾಗಿ ಯುವಕರು, ಗ್ರೇಟರ್ ಬೆಂಗಳೂರು ನಿರ್ಮಾಣದಲ್ಲಿ ಸರ್ಕಾರದೊಂದಿಗೆ ಸೇರಬೇಕೆಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT