ಸಲ್ಮಾನ್ ಪಾಷಾ ಮತ್ತು ಸೈಯ್ಯದ್ ನಿಖತ್ 
ರಾಜ್ಯ

ತುಮಕೂರು: ಫೇಸ್‌ಬುಕ್ ಲೈವ್‌ನಲ್ಲಿ ಆತ್ಮಹತ್ಯೆಗೆ ಪತಿ ಯತ್ನ; ಇದೊಂದು ಡ್ರಾಮಾ ಎಂದ ಪತ್ನಿ

ಕಳೆದ ನಾಲ್ಕು ವರ್ಷಗಳ ಹಿಂದೆ ಸೈಯದ್ ನಿಕತ್ ಫರ್ದೋಸ್ ಎಂಬಾಕೆ ಜೊತೆ ಸಲ್ಮಾನ್ ಪಾಷಾ ವಿವಾಹ ನಡೆದಿತ್ತು. ಮದುವೆ ನಂತರ ಎರಡು ವರ್ಷ ಸುಖ ಸಂಸಾರವನ್ನೂ ನಡೆಸಿದ್ದರು.

ತುಮಕೂರು: ಫೇಸ್‌ಬುಕ್ ಲೈವ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಸಂಬಂಧಿಕರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಲ್ಮಾನ್ ಪಾಷಾ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಸೈಯದ್ ನಿಕತ್ ಫರ್ದೋಸ್ ಎಂಬಾಕೆ ಜೊತೆ ಸಲ್ಮಾನ್ ಪಾಷಾ ವಿವಾಹ ನಡೆದಿತ್ತು. ಮದುವೆ ನಂತರ ಎರಡು ವರ್ಷ ಸುಖ ಸಂಸಾರವನ್ನೂ ನಡೆಸಿದ್ದರು.

ಪತ್ನಿ ಎರಡನೇ ಮಗುವಿನ ಗರ್ಭಿಣಿಯಾದಾಗ ಸಲ್ಮಾನ್​ ಗೆ ಕುವೈತ್​ ನಲ್ಲಿ ಹೈಡ್ರಾಲಿಕ್ ಮೆಕಾನಿಕ್ ಆಗಿ ಕೆಲಸ ಸಿಕ್ಕಿದೆ. ಹೀಗಾಗಿ ಆತ ವಿದೇಶಕ್ಕೆ ತೆರಳಿದ ಬಳಿಕ ಸೈಯದ್ ನಿಕತ್ ಫರ್ದೋಸ್ ತಾಯಿ ಮನೆಗೆ ತೆರಳಿದ್ದಾರೆ. ಆ ಬಳಿಕ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ.

AIMIM ಪಕ್ಷದ ತುಮಕೂರು ಜಿಲ್ಲಾಧ್ಯಕ್ಷನಾಗಿರುವ ಸೈಯದ್ ಬುರ್ಹಾನ್ ಉದ್ದೀನ್ ಜೊತೆ ಸೇರಿ ಪತ್ನಿ ಹೆಚ್ಚಿನ ಹಣಕ್ಕಾಗಿ ತನ್ನ ಪೀಡಿಸುತ್ತಿದ್ದಾಳೆ. ಜೊತೆಗೆ ಆಕೆಗೆ ಬುರ್ಹಾನ್ ಜೊತೆ ಅಕ್ರಮ ಸಂಬಂಧ ಇದ್ದು, ವಿದೇಶಿ ಕೆಲಸ ಬಿಟ್ಟು ತುಮಕೂರಿಗೆ ಬಂದರೂ ಇಬ್ಬರು ಮಕ್ಕಳನ್ನ ತೋರಿಸುತ್ತಿಲ್ಲ. ಹಣ ಕೊಡದಿದ್ದರೆ ವಿಚ್ಛೇದನ ನೀಡು ಎಂದು ಪತ್ನಿ ಹೇಳುತ್ತಿದ್ದು, ತುಮಕೂರು ಮಹಿಳಾ ಠಾಣೆ ಪೊಲೀಸರು ಸಹ ಹೆಂಡತಿ ಕುಟುಂಬಕ್ಕೆ ಬೆಂಬಲ ನೀಡುತ್ತಿದ್ದಾರೆ ಎನ್ನುವುದು ಸಲ್ಮಾನ್ ಪಾಷಾ ಆರೋಪ.

ಇನ್ನು ಗಂಡನ ಆರೋಪಗಳಿಗೆ ಪತ್ನಿ ಸೈಯದ್ ನಿಕತ್ ಫರ್ದೋಸ್ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆ ಸೋಪಿನ ನೀರು ಕುಡಿದು ಸಲ್ಮಾನ್​ ಡ್ರಾಮಾ ಮಾಡಿದ್ದ. ನಾನು ಕೆಲಸ ಮಾಡುವ ಜಾಗಕ್ಕೆ ಬಂದು ಆ್ಯಸಿಡ್ ಹಾಕುತ್ತೇನೆಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ನಾನು ದೂರು ಸಹ ಕೊಟ್ಟಿದ್ದೆ ಎಂದು ಮರು ಆರೋಪ ಮಾಡಿದ್ದಾರೆ.

ನಾನು ಗರ್ಭಿಣಿಯಾಗಿದ್ದಾಗ ತನ್ನ ಅತ್ತೆಯೇ ಮನೆಯಿಂದ ಹೊರ ಹಾಕಿದರು. AIMIM ಜಿಲ್ಲಾಧ್ಯಕ್ಷ ಬುರ್ಹಾನ್ ನನ್ನ ಮಾವನಾಗಿದ್ದು, ಕಷ್ಟಗಳಿಗೆ ನೆರವಾಗಿದ್ದಾರೆ. ಮಾವ ಎಂದರೇ ತಂದೆ ಸಮಾನ. ಆದರೆ ಸಲ್ಮಾನ್​ ಅವರ ಜೊತೆಗೇ ಅಕ್ರಮ ಸಂಬಂಧದ ಆರೋಪ ಹೊರಿಸುತ್ತಿದ್ದಾರೆ. ಮಕ್ಕಳನ್ನು ನೋಡಲು ಬಾರದ ಪತಿ, ಈಗ ನಾಟಕ ಮಾಡುತ್ತಿದ್ದಾರೆ ಎಂದು ಸೈಯದ್ ನಿಕತ್ ಫರ್ದೋಸ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ರಷ್ಯಾ ಸೇನೆ ಸೇರಿದ್ದ ಭಾರತ ಮೂಲದ ವ್ಯಕ್ತಿ ಬಂಧನ': ಭಾರತಕ್ಕೆ ಉಕ್ರೇನ್ ಮಾಹಿತಿ!

ಕೊನೆಗೂ Bigg Boss Kannada ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್!

ಕೊಪ್ಪಳದ ಗಂಗಾವತಿಯಲ್ಲಿ ಹರಿಯಿತು ನೆತ್ತರು: BJP ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

SCROLL FOR NEXT