ಪ್ರೊ.ನರಹರಿ  
ರಾಜ್ಯ

RSS ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ. ನರಹರಿ ನಿಧನ

ಅವರ ನಿಧನಕ್ಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೃ ನರಹರಿ ಅವರು ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಜೈಲುವಾಸವನ್ನೂ ಅನುಭವಿಸಿದ್ದರು.

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್‌ ಸದಸ್ಯ ಪ್ರೊ. ಕೃ. ನರಹರಿ ತಮ್ಮ 93ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಗ್ಗೆ 4.30ಕ್ಕೆ ಕೃ. ನರಹರಿ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೃ ನರಹರಿ ಅವರು ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಜೈಲುವಾಸವನ್ನೂ ಅನುಭವಿಸಿದ್ದರು.

ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹಕರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕೃ. ನರಹರಿ ಕಾರ್ಯನಿರ್ವಹಿಸಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ, ವಿಧಾನ ಪರಿಷತ್ ಮಾಜಿ ಸದಸ್ಯ ಕೃ.ನರಹರಿ ಅವರ ನಿಧನದ ಸುದ್ದಿ ಕೇಳಿ ಹೃದಯ ಭಾರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಾಕಿದ ಹಸು ತಿಂದಿದೆ ಎಂದು ಹುಲಿಗಳಿಗೆ ವಿಷ ಹಾಕಿದರೆ ಸಹಿಸಲ್ಲ, ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಕೊನೆಗೂ Bigg Boss Kannada ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್!

ಶಬರಿಮಲೆಯ ಮೂಲ ಚಿನ್ನದ ಹೊದಿಕೆ 'ದೈವಿಕ ಟ್ರೋಫಿ'ಯಾಗಿ ಮಾರಾಟ? TDB ಅಧಿಕಾರಿಗಳು ಹೇಳುವುದೇನು?

ಹಿಮಾಚಲ ಪ್ರದೇಶದ ಭೂಕುಸಿತ: ಸಾವಿನ ಸಂಖ್ಯೆ 16 ಕ್ಕೆ ಏರಿಕೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ!

ನಾಯಕತ್ವದಿಂದ ಕೊಕ್.. Rohit Sharma ಮೊದಲ ಪ್ರತಿಕ್ರಿಯೆ.. ಹೇಳಿದ್ದೇನು?

SCROLL FOR NEXT