ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಿವಿಗೆ ಹೆಡ್‌ಫೋನ್‌ ಹಾಕಿಕೊಂಡು ಹಳಿ ದಾಟುವಾಗ ರೈಲು ಡಿಕ್ಕಿ; ಬಿಬಿಎಂ ವಿದ್ಯಾರ್ಥಿ ಸಾವು

ವೀರಣ್ಣಪಾಳ್ಯ ನಿವಾಸಿ ಶಶಿಕುಮಾರ್‌(20) ಮೃತ ವಿದ್ಯಾರ್ಥಿ. ಮಂಗಳವಾರ ಬೆಳಿಗ್ಗೆ 8ರ ಸುಮಾರಿಗೆ ನಾಗೇನಹಳ್ಳಿ ರೈಲ್ವೆ ಟ್ರ್ಯಾಕ್‌ ಬಳಿ ಘಟನೆ ನಡೆದಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.

ಬೆಂಗಳೂರು: ಕಿವಿಯಲ್ಲಿ ಹೆಡ್‌ಫೋನ್‌ ಹಾಕಿಕೊಂಡು ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ನಾಗೇನಹಳ್ಳಿಯಲ್ಲಿ ನಡೆದಿದೆ.

ವೀರಣ್ಣಪಾಳ್ಯ ನಿವಾಸಿ ಶಶಿಕುಮಾರ್‌(20) ಮೃತ ವಿದ್ಯಾರ್ಥಿ. ಮಂಗಳವಾರ ಬೆಳಿಗ್ಗೆ 8ರ ಸುಮಾರಿಗೆ ನಾಗೇನಹಳ್ಳಿ ರೈಲ್ವೆ ಟ್ರ್ಯಾಕ್‌ ಬಳಿ ಘಟನೆ ನಡೆದಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.

ವೀರಣ್ಣಪಾಳ್ಯದ ನಿವಾಸಿ ವಾಸುದೇವ್ ಅವರ ಪುತ್ರ ಶಶಿಕುಮಾರ್‌, ಯಲಹಂಕದಲ್ಲಿ ಇರುವ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ಬೆಳಿಗ್ಗೆ ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವಾಗ ಕಿವಿಗೆ ಹೆಡ್‌ಫೋನ್‌ ಹಾಕಿಕೊಂಡು ನಾಗೇನಹಳ್ಳಿ ರೈಲ್ವೆ ಹಳಿ ದಾಟುತ್ತಿದ್ದ.

ಆ ಸಮಯದಲ್ಲಿ ಎಲೆಕ್ಟ್ರಿಕ್ ಎಂಜಿನ್‌ನ ಗೂಡ್ಸ್‌ ರೈಲು ಬಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಚಿಕ್ಕಬಳ್ಳಾಪುರ: ಗಂಗಮ್ಮ ದೇವಿ ವಿಗ್ರಹದ ಮೇಲೆ ಕಾಲಿಟ್ಟು ಮಹಿಳೆಯರ ಸ್ನಾನ, Video ವೈರಲ್!

Konaseema ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ಮಾಲೀಕ ಸೇರಿ ಕನಿಷ್ಠ 7 ಸಾವು, ಹಲವರಿಗೆ ಗಂಭೀರ ಗಾಯ

ಮೊದಲು 60 ಕೋಟಿ ಠೇವಣಿಯಿಡಿ: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿದೇಶ ಪ್ರವಾಸಕ್ಕೆ ಬಾಂಬೆ ಹೈಕೋರ್ಟ್ ನಿರ್ಬಂಧ!

ಪಾಕಿಸ್ತಾನದಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ Pakistan ಲೆಫ್ಟಿನೆಂಟ್ ಕರ್ನಲ್, ಮೇಜರ್ ಸೇರಿದಂತೆ 11 ಪಾಕ್ ಸೈನಿಕರ ಹತ್ಯೆ

SCROLL FOR NEXT