ಸಿಟಿ ಸಿವಿಲ್ ಕೋರ್ಟ್ 
ರಾಜ್ಯ

ಬೆಂಗಳೂರು: ನ್ಯಾಯಾಲಯದ 5ನೇ ಮಹಡಿಯಿಂದ ಜಿಗಿದು ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆ

ಇಂದು ಬೆಳಗ್ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಗೌತಮ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ನ್ಯಾಯಾಲಯದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ನಡೆದಿದೆ.

ಇಂದು ಬೆಳಗ್ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಗೌತಮ್ ಎಂದು ಗುರುತಿಸಲಾಗಿದೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯಕೀಯ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಗೌತಮ್ ಕೆ.ಆರ್.ಪುರಂನ ಆಕಾಶನಗರದ ನಿವಾಸಿಯಾಗಿದ್ದು, ತನ್ನ ಸಂಬಂಧಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿಸಲಾಗಿತ್ತು.

ಗೌತಮ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದ ಆಡುಗೋಡಿ ಪೊಲೀಸರು, ಕಳೆದ ಏಪ್ರಿಲ್​ನಲ್ಲಿ ಬಂಧಿಸಿ ಜೈಲಿಗೆ ಕಳಿಸಿದ್ದರು.

3ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಿಗದಿಯಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಗೌತಮ್ ಜೊತೆಗೆ ಮತ್ತೊಂದು ಪ್ರಕರಣದ ಆರೋಪಿಯನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗ್ಗೆ ನ್ಯಾಯಾಲಯಕ್ಕೆ ಕರೆತಂದಿದ್ದರು.

ಆರೋಪಿಗಳನ್ನು ಕೈಕೊಳ ಧರಿಸಿಯೇ ಕೋರ್ಟ್​​ಗೆ ಕರೆತರಲಾಗಿತ್ತು. ಬಳಿಕ ಕೋರ್ಟ್ ಹಾಲ್‌ನಲ್ಲಿ ಕೈಕೊಳವನ್ನು ಪೊಲೀಸರು ಬಿಚ್ಚಿದ್ದರು. ವಿಚಾರಣೆ ಮುಗಿಸಿ ಹೊರಬಂದ ಗೌತಮ್, ಕುಟುಂಬಸ್ಥರನ್ನು ಕಂಡು ತೀರ ಬೇಸರ ಮಾಡಿಕೊಂಡರು ಮತ್ತು ಏಕಾಏಕಿ ಪೊಲೀಸರಿಂದ ತಪ್ಪಿಸಿಕೊಂಡು ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಹಲಸೂರು ಗೇಟ್ ಪೊಲೀಸರು ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT