ನಟ- ನಿರ್ದೇಶಕ ರಿಷಬ್ ಶೆಟ್ಟಿ- ದೈವ (ಸಂಗ್ರಹ ಚಿತ್ರ) online desk
ರಾಜ್ಯ

Kantara: ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನೋಡ್ಕೊತೀನಿ; ಹಣವೆಲ್ಲ‌ ಆಸ್ಪತ್ರೆ ಸೇರುವಂತೆ ಮಾಡ್ತೀನಿ; ಅನುಕರಣೆಗೆ ಆಕ್ರೋಶಗೊಂಡ ದೈವದ ಎಚ್ಚರಿಕೆ!

ಸಿನಿಮಾ ಅಭಿಮಾನಿಗಳು ಕಂಡಕಂಡಲ್ಲಿ ದೈವದ ಅನುಕರಣೆ ಮಾಡುತ್ತಿರುವುದು ದೈವನರ್ತಕರು, ದೈವಾರಾಧಕರು ಹಾಗೂ ತುಳುನಾಡಿನ ಜನತೆಯ ಕೆಂಗಣ್ಣಿಗೆ ಗುರಿಯಾಗಿದೆ.

ಮಂಗಳೂರು: ಕಾಂತಾರ ಚಾಪ್ಟರ್ 1 ಸಿನಿಮಾ ಸಕಾರಾತ್ಮಕ ವಿಷಯಗಳಿಗೆ ಸುದ್ದಿಯಾಗುತ್ತಿರುವಂತೆಯೇ, ಅಭಿಮಾನಿಗಳ ಅತಿರೇಕದ ವರ್ತನೆಯ ಪರಿಣಾಮ ನಕಾರಾತ್ಮಕ ಸುದ್ದಿಗಳು ಬೆಳಕಿಗೆ ಬರುತ್ತಿವೆ.

ಸಿನಿಮಾ ವೀಕ್ಷಿಸಿ ಮನಸ್ಸಿನಲ್ಲಿ ಭಕ್ತಿ ಭಾವಗಳನ್ನು ತುಂಬಿಕೊಂಡು ಹೊರಬರುವವರು ಒಂದೆಡೆಯಾದರೆ, ಮತ್ತೊಂದೆಡೆ ಅತಿರೇಕದ ವರ್ತನೆಯಿಂದ ದೈವದ ಅನುಕರಣೆ ಮಾಡುತ್ತಿರುವ ಘಟನೆಗಳು, ಅದರ ವಿಡಿಯೋಗಳು ವೈರಲ್ ಆಗತೊಡಗಿದೆ.

ಸಿನಿಮಾ ಅಭಿಮಾನಿಗಳು ಕಂಡಕಂಡಲ್ಲಿ ದೈವದ ಅನುಕರಣೆ ಮಾಡುತ್ತಿರುವುದು ದೈವನರ್ತಕರು, ದೈವಾರಾಧಕರು ಹಾಗೂ ತುಳುನಾಡಿನ ಜನತೆಯ ಕೆಂಗಣ್ಣಿಗೆ ಗುರಿಯಾಗಿದೆ. ಈ ಬೆಳವಣಿಗೆಗಳಿಂದ ಬೇಸತ್ತ ದೈವನರ್ತಕರು ದೈವಕ್ಷೇತ್ರದ ಮೊರೆ ಹೋಗಿದ್ದು ನೊಂದು ದೂರು ನೀಡಿದ್ದಾರೆ.

ದೂರಿಗೆ ದೈವ ಪ್ರತಿಕ್ರಿಯೆ ನೀಡಿದ್ದು, ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನಾನು ನೋಡಿಕೊಳ್ಳುತ್ತೇನೆ. ಹಣವೆಲ್ಲ‌ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ. ಅಪಚಾರ ಮಾಡುವವರಿಗೆ ನಾನು ಬುದ್ದಿ ಕಲಿಸುತ್ತೇನೆ. ಇನ್ಮುಂದೆ ಎಲ್ಲಾ ದೈವಸ್ಥಾನಗಳಲ್ಲಿ ಚಿತ್ರೀಕರಣ ನಿಲ್ಲಿಸಿ. ನೀವು ಹೋರಾಟವನ್ನು ಮುಂದುವರಿಸಿ. ನಾನು ನಿಮ್ಮ ಬೆನ್ನ ಹಿಂದೆ ಇದ್ದೇನೆ’ ಎಂದು ಹೇಳಿದೆ.

ಮಂಗಳೂರು ಹೊರವಲಯದ ಬಜಪೆ ಸಮೀಪದ ‌ಶ್ರೀ ಕ್ಷೇತ್ರ ಪೆರಾರದ ಬಲವಂಡಿ, ಪಿಲಿಚಂಡಿ ದೈವದ ಮುಂದೆ ದೈವ ನರ್ತಕರು ದೈವಾರಾಧನೆಯ ಅಪಹಾಸ್ಯದ ವಿರುದ್ಧ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಸಿನಿಮಾದಲ್ಲಿ ದೈವಾರಾಧನೆ ಬಳಕೆ ಬಗ್ಗೆ ದೂರು ಹೇಳಿದ್ದು, ದೈವದ ಆವೇಶವನ್ನು ಅನುಕರಣೆ ಮಾಡುತ್ತಿರುವ ಬಗ್ಗೆ ದೈವರಾಧಕರ ಬೇಸರ ವ್ಯಕ್ತಪಡಿಸಿದ್ದರು.

ದೈವವನ್ನು ಅನುಕರಣೆ ಮಾಡುವುದನ್ನು 2022 ರಲ್ಲಿ ಮೊದಲ ‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗಿನಿಂದಲೂ ರಿಷಬ್ ಶೆಟ್ಟಿ, ಹೊಂಬಾಳೆ ವಿರೋಧಿಸುತ್ತಿದ್ದು, ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ. ಇತ್ತೀಚೆಗೆ ಸಹ ಪೋಸ್ಟ್ ಹಂಚಿಕೊಂಡಿದ್ದ ಹೊಂಬಾಳೆ ಫಿಲಮ್ಸ್, ದೈವದ ಅನುಕರಣೆ ಮಾಡುವುದು ಬೇಡ ಎಂದು ಮನವಿ ಮಾಡಿತ್ತು. ಆದರೂ ಅದು ಮುಂದುವರೆದಿರುವ ಹಿನ್ನೆಲೆಯಲ್ಲಿ ಈ ಬಾರಿ ದೈವವೇ ನೇರವಾಗಿ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT