ಕಂದಾಯ ಸಚಿವ ಕೃಷ್ಣ ಬೈರೇಗೌಡ 
ರಾಜ್ಯ

ಬೆಳೆ ನಷ್ಟ ಪರಿಹಾರ ಪ್ರಕ್ರಿಯೆ ಆರಂಭ: 30 ದಿನಗಳಲ್ಲಿ ರೈತರ ಖಾತೆಗಳಿಗೆ ಹಣ ಜಮಾ!

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಮಾನದಂಡಗಳ ಅಡಿಯಲ್ಲಿ, ಒಣ ಭೂಮಿಗೆ ಹೆಕ್ಟೇರ್‌ಗೆ 8,500 ರೂ., ನೀರಾವರಿ ಭೂಮಿಗೆ ಹೆಕ್ಟೇರ್‌ಗೆ 17,000 ರೂ. ಮತ್ತು ದೀರ್ಘಕಾಲಿಕ ಬೆಳೆಗಳಿಗೆ ಹೆಕ್ಟೇರ್‌ಗೆ 22,500 ರೂ. ಪರಿಹಾರವನ್ನು ನೀಡಲಾಗುತ್ತದೆ.

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 30 ದಿನಗಳಲ್ಲಿ ಎಲ್ಲ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ ಜಮಾ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ

ಮೊದಲ ಸುತ್ತಿನಲ್ಲಿ, ಒಂಬತ್ತು ಜಿಲ್ಲೆಗಳ ಸುಮಾರು 5.29 ಲಕ್ಷ ಹೆಕ್ಟೇರ್‌ಗಳ ನಷ್ಟಕ್ಕೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಮಾನದಂಡಗಳ ಅಡಿಯಲ್ಲಿ, ಒಣ ಭೂಮಿಗೆ ಹೆಕ್ಟೇರ್‌ಗೆ 8,500 ರೂ., ನೀರಾವರಿ ಭೂಮಿಗೆ ಹೆಕ್ಟೇರ್‌ಗೆ 17,000 ರೂ. ಮತ್ತು ದೀರ್ಘಕಾಲಿಕ ಬೆಳೆಗಳಿಗೆ ಹೆಕ್ಟೇರ್‌ಗೆ 22,500 ರೂ. ಪರಿಹಾರವನ್ನು ನೀಡಲಾಗುತ್ತದೆ. ಇದರೊಂದಿಗೆ ಸರ್ಕಾರವು ರೈತರಿಗೆ ಹೆಕ್ಟೇರ್‌ಗೆ 8,500 ರೂ. ಹೆಚ್ಚುವರಿ ಪಾವತಿಯನ್ನು ಸಹ ಪಾವತಿಸುತ್ತಿದೆ. ಪರಿಹಾರ ಹಣ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಿಧಿ ವರ್ಗಾವಣೆಯಾಗಲಿದೆ.

ಕರ್ನಾಟಕದ ಪರಿಹಾರ ಬಿಡುಗಡೆ ವಿಧಾನವು ದೇಶದಲ್ಲಿ ಅತ್ಯಂತ ತ್ವರಿತ ಮತ್ತು ಪಾರದರ್ಶಕವಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು. ಇತ್ತೀಚೆಗೆ ಹಾನಿಗೊಳಗಾದ ಸುಮಾರು 7.24 ಲಕ್ಷ ಹೆಕ್ಟೇರ್‌ಗಳಷ್ಟು ಬೆಳೆ ಪಾವತಿ 10 ದಿನಗಳಲ್ಲಿ ಪ್ರಾರಂಭವಾಗಲಿದೆ ಎಂದು ಸಚಿವರು ಹೇಳಿದರು.

ಪ್ರಸ್ತುತ, ಎರಡನೇ ಸುತ್ತಿನ ಪ್ರವಾಹ ಮತ್ತು ಬೆಳೆ ನಷ್ಟದ ಅಂದಾಜು ಮಾಡಲು ಜಂಟಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಮುಖ್ಯವಾಗಿ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳ ಸುಮಾರು 7.24 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ನಷ್ಟವನ್ನು ಅಂದಾಜು ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಲಾಗಿತ್ತು. ಸೆಪ್ಟೆಂಬರ್ ಮೊದಲ ವಾರದವರೆಗಿನ ಆರಂಭಿಕ ಸಮೀಕ್ಷೆಯ ಪ್ರಕಾರ, 5.29 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ. ಈಗಾಗಲೇ ಜಂಟಿ ಸಮೀಕ್ಷೆ ಪೂರ್ಣಗೊಂಡಿದ್ದು, ಜಿಲ್ಲಾಡಳಿತಗಳು ಪಾವತಿಗೆ ಸಿದ್ಧವಾಗಿದ್ದವು ಆದರೆ ಸೆಪ್ಟೆಂಬರ್ ಎರಡನೇ ವಾರದಲ್ಲಿ ಮತ್ತೆ ಮಳೆಯಾದ ಕಾರಣ ಪ್ಲಾನ್ ತಲೆಕೆಳಗಾಯಿತು.

ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಬಿಜೆಪಿ ನಾಯಕರು ಪರಿಹಾರವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದರು. ಬಿಜೆಪಿ ನಾಯಕರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು ಮತ್ತು ಅವರು ಸಿಎಂ ಅವರ ವೈಮಾನಿಕ ಸಮೀಕ್ಷೆಯನ್ನು ಫೋಟೋ-ಶೋಆಪ್ ಎಂದು ಕರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಕೋಲ್ಡ್ರಿಫ್ ವಿಷಕಾರಿ': 17 ಮಕ್ಕಳ ಸಾವಿನ ಬಳಿಕ ಕೊನೆಗೂ ಎಚ್ಚೆತ್ತ ಕೇಂದ್ರ ಸರ್ಕಾರ, ಮೂರು ಕೆಮ್ಮಿನ ಸಿರಪ್‌ಗಳು ನಿಷೇಧ!

20 ಕ್ಕೂ ಹೆಚ್ಚು ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್‌: ಫಾರ್ಮಾ ಕಂಪನಿಯ ಮಾಲೀಕ ಅರೆಸ್ಟ್

ಕೆಲಸವಿಲ್ಲ ಎಂದು ಗೊಣಗುವುದಕ್ಕಿಂತ ಕೆಲಸ ಸೃಷ್ಟಿಸಿಕೊಳ್ಳುವುದು ಮೇಲು! (ಹಣಕ್ಲಾಸು)

Chamarajpet: ಚಾಲಕನ ನಿಯಂತ್ರಣ ತಪ್ಪಿದ ಟ್ರಕ್‌ ಪೆಟ್ರೋಲ್ ಬಂಕ್ ಗೆ ಢಿಕ್ಕಿ, ಭೀಕರ Video

ಬಿಹಾರ ವಿಧಾನಸಭಾ ಚುನಾವಣೆ: ಆರ್ ಜೆಡಿ ಪ್ರಚಾರ, ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿಯ ಭರವಸೆ!

SCROLL FOR NEXT