ಮೃತ ಜಯಶ್ರೀ 
ರಾಜ್ಯ

ಚಿಕ್ಕಬಳ್ಳಾಪುರ: ಬೇರೆ ಮಹಿಳೆಯೊಂದಿಗೆ ಪತಿಯ ಸಂಬಂಧ, ಬೆಂಕಿ ಹಚ್ಚಿಕೊಂಡು ನವವಿವಾಹಿತೆ ಆತ್ಮಹತ್ಯೆ!

ಜಯಶ್ರೀ ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ. ತವರು ಮನೆಯಲ್ಲಿ ಮನೆಯ ಹೊರಭಾಗದ ಶೌಚಾಲಯದಲ್ಲಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಚಿಕ್ಕಬಳ್ಳಾಪುರ: ಬೇರೆ ಮಹಿಳೆಯೊಂದಿಗೆ ಪತಿ ಅಕ್ರಮ ಸಂಬಂಧ ಹೊಂದಿದ್ದರಿಂದ ಬೇಸತ್ತ ನವ ವಿವಾಹಿತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೊಂಡವಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಯಶ್ರೀ ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ. ತವರು ಮನೆಯಲ್ಲಿ ಮನೆಯ ಹೊರಭಾಗದ ಶೌಚಾಲಯದಲ್ಲಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಅಂದಹಾಗೆ, ಕಳೆದ 6 ತಿಂಗಳ ಹಿಂದೆಯಷ್ಟೇ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಹಳ್ಳಿಯ ನಿವಾಸಿ ಚಂದ್ರಶೇಖರ್ ಜೊತೆ ವಿವಾಹವಾಗಿತ್ತು. ಆದರೆ. ಆದರೆ ದಿನೇ ದಿನೇ ಇಬ್ಬರ ಮಧ್ಯೆ ಹೊಂದಾಣಿಕೆ ಕಡಿಮೆಯಾಗಿದ್ದು, ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿ ನವ ವಿವಾಹಿತೆ ಫೇಸ್ ಬುಕ್ ನಲ್ಲಿ ಡೆತ್​ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೇರೆ ಯುವತಿ ಜೊತೆ ಗಂಡನಿಗೆ ಅಕ್ರಮ ಸಂಬಂಧವಿದ್ದು, ಮದುವೆ ಬಳಿಕ ಈ ವಿಷಯ ನನಗೆ ತಿಳಿಯಿತು. ಇಬ್ಬರೂ ಯಾವಾಗಲೂ ಫೋನ್​, ಚಾಟಿಂಗ್​ ಮಾಡುತ್ತಿರುತ್ತಾರೆ. ಇದನ್ನು ಪ್ರಶ್ನಿಸಿದರೆ ಗಂಡ ಕೋಪಮಾಡಿಕೊಂಡು ಜಗಳವಾಡುತ್ತಾರೆ. ಅವರ ಕಿರುಕುಳದಿಂದಾಗಿ ಬೇಸತ್ತು ಸೂಸೈಡ್​ ಮಾಡಿಕೊಳ್ಳುತ್ತಿರೋದಾಗಿ ಡೆತ್​ ನೋಟ್​ ನಲ್ಲಿ ಆಕೆ ಆರೋಪಿಸಿದ್ದಾಳೆ.

ಈ ಸಂಬಂಧ ಜಯಶ್ರೀ ತಂದೆ ಶ್ರೀಧರ್ ನೀಡಿದ ದೂರಿನ ಮೇರೆಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT