ಸಾಂದರ್ಭಿಕ ಚಿತ್ರ  
ರಾಜ್ಯ

Bus strike: ಬೇಡಿಕೆಗೆ ಕ್ಯಾರೇ ಎನ್ನದ ಸರ್ಕಾರ; ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದು

38 ತಿಂಗಳ ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅ. 15 ರಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ.

ಬೆಂಗಳೂರು: ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ಸರ್ಕಾರಿ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಅಕ್ಟೋಬರ್ 15 ರಿಂದ 19 ರವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ದಾರೆ.

ಬೇಡಿಕೆಗಳೇನು?

38 ತಿಂಗಳ ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅ. 15 ರಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ. ಅ. 15ರಿಂದ 19ರವರೆಗೆ ಬೆಂಗಳೂರು, ಹುಬ್ಬಳ್ಳಿ ಹಾಗೂ ಕಲಬುರಗಿ ನಗರಗಳಲ್ಲಿ ಐದು ದಿನಗಳ ಕಾಲ ನಾಲ್ಕು ಸಾರಿಗೆ ನಿಗಮಗಳ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಈ ಹಿಂದೆಯೂ ಮುಷ್ಕರ

ಇದರಿಂದ ಸಾರ್ವಜನಿಕರಿಗೆ ಸಂಚಾರಕ್ಕೆ ಅಡಚಣೆಯಾಗಲಿದೆ. ಆಗಸ್ಟ್‌- 5 ರಂದು ನಾಲ್ಕು ನಿಗಮದ ನೌಕರರು ಸಾರಿಗೆ ಮುಷ್ಕರಕ್ಕೆ ಮುಂದಾಗಿದ್ದರು. ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರವನ್ನು ವಾಪಸ್ ಪಡೆಯಲಾಗಿತ್ತು. ಆದರೆ ಇಲ್ಲಿಯವರೆಗೆ ರಾಜ್ಯ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ ಮತ್ತು ಮಾತುಕತೆಗೆ ಕರೆಯುತ್ತಿಲ್ಲ. ಹೀಗಾಗಿ ಮತ್ತೆ ಮುಷ್ಕರ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಬೇಡಿಕೆ ಈಡೇರಿಸದ ಸರ್ಕಾರ

ಆ. 5ರಂದು ಆರಂಭಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹೈಕೋರ್ಟ್ ಆದೇಶದ ಮೇರೆಗೆ ತಡೆಹಿಡಿಯಲಾಗಿತ್ತು. ಸರಕಾರ ಬೇಡಿಕೆಗಳ ಕುರಿತು ಮಾತುಕತೆ ಮುಂದುವರಿಸುವುದಾಗಿ ಹೈಕೋರ್ಟ್‌ಗೆ ತಿಳಿಸಿತ್ತು. ಆದರೆ, ಸರಕಾರ ಈವರೆಗೂ ಮಾತುಕತೆ ಆರಂಭಿಸದೆ ಕಾರ್ಮಿಕ ವಿರೋಧಿ ಧೋರಣೆ ತಾಳಿದೆ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಚ್‌.ವಿ. ಅನಂತ ಸುಬ್ಬರಾವ್‌ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT