ಬ್ರಹ್ಮಾಂಡ ಗುರೂಜಿ ಮತ್ತು ಹಾಸನಾಂಬೆ ದೇಗುಲ 
ರಾಜ್ಯ

'ಗಂಡಾಂತರ.. ಈ ವರ್ಷವೇ ಕೊನೆ, ಹಾಸನಾಂಬೆ ಸಾನಿಧ್ಯವೇ ಇರಲ್ಲ..': ಬ್ರಹ್ಮಾಂಡ ಗುರೂಜಿ 'ಭಯಾನಕ' ಭವಿಷ್ಯ

ಈ ವರ್ಷ ಹಾಸನಾಂಬೆಗೆ ಕೊನೆಯ ವರ್ಷವಾಗಿದ್ದು, ಮುಂದಿನ ವರ್ಷದಿಂದ ಅಮ್ಮನವರ ಸಾನಿಧ್ಯ ಇಲ್ಲಿ ಇರಲ್ಲ' ಎಂದು ಹೇಳಿದ್ದಾರೆ.

ಹಾಸನ: ಮುಂಬರುವ ದಿನಗಳಲ್ಲಿ ಹಾಸನಂಬೆ ಸಾನಿಧ್ಯವೇ ಇರುವುದಿಲ್ಲ ಎಂದು ಬ್ರಹ್ಮಾಂಡ ಗುರೂಜಿ 'ಭಯಾನಕ ಭವಿಷ್ಯ' ನುಡಿದಿದ್ದಾರೆ.

ಇಂದು ಹಾಸನದಲ್ಲಿ ಹಾಸನಾಂಬೆಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ, 'ಈ ವರ್ಷ ಹಾಸನಾಂಬೆಗೆ ಕೊನೆಯ ವರ್ಷವಾಗಿದ್ದು, ಮುಂದಿನ ವರ್ಷದಿಂದ ಅಮ್ಮನವರ ಸಾನಿಧ್ಯ ಇಲ್ಲಿ ಇರಲ್ಲ' ಎಂದು ಹೇಳಿದ್ದಾರೆ.

'ಹಾಸನಾಂಬೆ ದರ್ಶನಕ್ಕೆ ಮುಂದಿನ ದಿನಗಳಲ್ಲಿ ಅವಕಾಶಗಳು ಅಡಚಣೆಯಾಗುವ ಸಾಧ್ಯತೆಯಿದೆ. 2025 ರಿಂದ 2032ರ ಅವಧಿಯಲ್ಲಿ ಸಿದ್ದೇಶ್ವರನ ಕೃಪೆಯಿಂದ ‘‘ಘಟಪ್ರಭ ಪರಿವರ್ತನೆ’’ ಆಗಲಿದೆ. ಈ ಸಮಯದಲ್ಲಿ ಏಳು ಜನ ಅಕ್ಕ-ತಂಗಿಯರು ಸೇರಲಿದ್ದಾರೆ. ಈ ಕೊನೆಯ ಅವಧಿಯಲ್ಲಿ ದರ್ಶನ ಪಡೆದವರು ಸಂತೋಷ ಪಡುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ.

'ಸಿದ್ದೇಶ್ವರನ ಕೃಪಾಶೀರ್ವಾದದಿಂದ ಮುಂದಿನ ದಿನಗಳಲ್ಲಿ ಮಹತ್ವದ ಬದಲಾವಣೆಗಳು ನಡೆಯಲಿವೆ. ರೇವಣ ಸಿದ್ದೇಶ್ವರ, ಹಾಸನದ ಸಿದ್ದೇಶ್ವರ, ಜೇನುಕಲ್ ಸಿದ್ದೇಶ್ವರ ಸೇರಿದಂತೆ ವಿವಿಧ ಸಿದ್ದೇಶ್ವರರ ಶಿವನ ಶಕ್ತಿ ಒಂದು ಕಡೆ ಸೇರಲಿದೆ. ವಿಶೇಷವಾಗಿ 2025 ರಿಂದ 2032 ರ ಅವಧಿಯಲ್ಲಿ ಈ ಬದಲಾವಣೆಗಳು ಘಟಿಸಲಿವೆ. ಸಿದ್ದೇಶ್ವರ ಸಾನಿಧ್ಯ ತೆಗೆದಾಗ, ಇಲ್ಲಿ ಸೇರಿರುವ ಏಳು ಜನ ಅಕ್ಕ-ತಂಗಿಯರು ಸೇರಿ ‘‘ಘಟಪ್ರಭ ಪರಿವರ್ತನೆ’’ ಎಂಬ ದೊಡ್ಡ ಬದಲಾವಣೆ ಆಗಲಿದೆ ಎಂದರು.

ಈ ವರ್ಷವೇ ಕೊನೆ. ಹಾಸನಾಂಬೆ ಸಾನಿಧ್ಯ ಇರಲ್ಲ

ಅಂತೆಯೇ, 'ಈ ಜಗತ್ಪ್ರಸಿದ್ದ ಹಾಸನಾಂಬೆಯ ವೈಶಿಷ್ಟ್ಯತೆಯನ್ನು ಈ ಕೊನೆಯ ಅವಧಿಯಲ್ಲಿ ನಾವು ದರ್ಶನ ಮಾಡಿದೆವಲ್ಲ ಎಂದು ಸಂತೋಷ ಪಡುತ್ತೇವೆ. ಮುಂದಿನ ಅವಕಾಶಗಳು ನಮಗಲ್ಲ. ಯಾವ ಜನರಿಗೂ ಹಾಸನಾಂಬೆ ದರ್ಶನ ಆಗುವ ಅವಕಾಶಗಳು ಕಡಿಮೆ, ಅಡಚಣೆಗಳು ಎಷ್ಟು ಬರುತ್ತವೆ ಎಂಬುದನ್ನು ನೀವೇ ಮುಂದೆ ನೋಡುತ್ತೀರಿ' ಎಂದು ಬ್ರಹ್ಮಾಂಡ ಗುರೂಜಿ ಹೇಳಿದರು.

ಮಹಿಳೆಯರು ಖರ್ಚು ಕಡಿಮೆ ಮಾಡಿ, ಜಗತ್ತಿಗೆ ಮತ್ತೊಂದು ಗಂಡಾಂತರ ಕಾದಿದೆ

ಇದೇ ವೇಳೆ ಮಹಿಳೆಯರು ತಮ್ಮ ಖರ್ಚುಗಳನ್ನು ಕಡಿಮೆ ಮಾಡಿಕೊಳ್ಳುವಂತೆ ಸಲಹೆ ನೀಡಿದ ಬ್ರಹ್ಮಾಂಡ ಗುರೂಜಿ, ಜಗತ್ತಿಗೆ ಮತ್ತೊಂದು ಗಂಡಾಂತರ ಕಾದಿದೆ ಎಂದು ಭವಿಷ್ಯ ನುಡಿದರು. 'ಈ ವರ್ಷದಿಂದ ಮಹಿಳೆಯರು ತಮ್ಮ ಖರ್ಚುಗಳನ್ನು ಕಡಿಮೆ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಖರ್ಚುಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದರು. ಅಲ್ಲದೆ ಕೊನೆಯದಾಗಿ ಎಲ್ಲರಿಗೂ ಹಾಸನಾಂಬೆ ಆಯುರಾರೋಗ್ಯ, ಐಶ್ವರ್ಯವನ್ನು ನೀಡಿ ಕಾಪಾಡಲಿ ಎಂದು ಹಾರೈಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT