ಸಾಂದರ್ಭಿಕ ಚಿತ್ರ 
ರಾಜ್ಯ

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ತಮ್ಮ ಇಚ್ಛೆಗೆ ವಿರುದ್ಧವಾಗಿ ಓಡಿಹೋದ ಮಗಳ ತಿಥಿ ಮಾಡಿದ ವ್ಯಕ್ತಿಯೊಬ್ಬರು, ಇಡೀ ಊರಿಗೆ ಊಟ ಹಾಕಿಸಿದ ಘಟನೆ ನಡೆದಿದೆ. ಮಗಳು ತಮ್ಮ ಪಾಲಿಗೆ ಸತ್ತು ಹೋದಳೆಂದು ತಂದೆ ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ.

ಬೆಳಗಾವಿ: ಪ್ರಿಯಕರನೊಂದಿಗೆ ತನ್ನ ಮಗಳು ಪರಾರಿಯಾದಳು ಎಂಬ ಕೋಪದಿಂದ ವ್ಯಕ್ತಿಯೋರ್ವ ಆಕೆಯ ಅಂತಿಮ ವಿಧಿವಿಧಾನ ನೆರವೇರಿಸಿ ಇಡೀ ಗ್ರಾಮಕ್ಕೆ ತಿಥಿ ಊಟ ಹಾಕಿಸಿರುವ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ.

ಬೆಳಗಾವಿಯ ರಾಯಭಾಗದ ನಾಗರಾಳ ಗ್ರಾಮದಲ್ಲಿ ಈ ವಿಚಿತ್ರ ಘಟನೆ ವರದಿಯಾಗಿದೆ. ತಮ್ಮ ಇಚ್ಛೆಗೆ ವಿರುದ್ಧವಾಗಿ ಓಡಿಹೋದ ಮಗಳ ತಿಥಿ ಮಾಡಿದ ವ್ಯಕ್ತಿಯೊಬ್ಬರು, ಇಡೀ ಊರಿಗೆ ಊಟ ಹಾಕಿಸಿದ ಘಟನೆ ನಡೆದಿದೆ. ಮಗಳು ತಮ್ಮ ಪಾಲಿಗೆ ಸತ್ತು ಹೋದಳೆಂದು ತಂದೆ ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ.

ನಾಗರಾಳ ಗ್ರಾಮದ ಶಿವಗೌಡ ಎಂಬವರ ಮಗಳು ಅದೇ ಗ್ರಾಮದ ವಿಠ್ಠಲ್ ಬಸ್ತವಾಡೆ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ, ಪೋಷಕರಿಗೆ ಈ ಬಗ್ಗೆ ಸಮ್ಮತಿ ಇರಲಿಲ್ಲ. ಇಂಥ ಸಂದರ್ಭದಲ್ಲೇ ಶಿವಗೌಡ ಮಗಳು ವಿಠ್ಠಲ್ ಬಸ್ತವಾಡೆ ಜತೆ ಪರಾರಿಯಾಗಿದ್ದಾಳೆ. ಮೊದಲಿಗೆ ಶಿವಗೌಡ ಅವರು ರಾಯಬಾಗ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ನಂತರ, ಮಗಳು ಪ್ರೀತಿಸಿದ ಯುವಕನ ಜತೆ ಓಡಿಹೋಗಿರುವುದು ಗೊತ್ತಾಗಿದೆ. ಇದರಿಂದ ಮನನೊಂದ ಅವರು ಮಗಳು ತಮ್ಮ ಪಾಲಿಗೆ ಸತ್ತು ಹೋಗಿದ್ದಾಳೆ ಎಂದು ತಿಥಿ ಮಾಡಿದ್ದಾರೆ.

ಮೂಲಗಳ ಪ್ರಕಾರ ಶಿವಗೌಡಗೆ ನಾಲ್ಕು ಜನ ಹೆಣ್ಣುಮಕ್ಕಳಿದ್ದು, ಈ ಪೈಕಿ ಈಗ ಓಡಿಹೋದವಳು ಕೊನೆಯವಳಾಗಿದ್ದಳು. ಮಗಳು ಮನೆತನದ ಸಂಸ್ಕಾರ ಮುರಿದು ಓಡಿಹೋಗಿದ್ದರಿಂದ ಮನನೊಂದಿರುವ ಶಿವಗೌಡ ಪಾಟೀಲ್, ನಾಗರಾಳ ಗ್ರಾಮದಲ್ಲಿ ಹೆತ್ತ ಮಗಳಿಗೆ ಶ್ರಾದ್ಧ ಮಾಡಿದ್ದಾರೆ.

ಮಾತ್ರವಲ್ಲದೇ ಬಂಧು-ಬಳಗ ಸೇರಿದಂತೆ ಸಂಬಂಧಿಕರನ್ನು ಕರೆಸಿ ತಿಥಿ ಊಟ ಹಾಕಿಸಿದ್ದಾರೆ. ಅಷ್ಟೇ ಅಲ್ಲದೆ, ಮಗಳ ಫೋಟೊ ಹಾಕಿ ಊರ ತುಂಬ ಶ್ರದ್ಧಾಂಜಲಿ ಬ್ಯಾನರ್​ಗಳನ್ನೂ ಹಾಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ