ಬೆಳಗಾವಿಯಲ್ಲಿ ಬೀದಿನಾಯಿ ದಾಳಿ (ಸಾಂದರ್ಭಿಕ ಚಿತ್ರ) 
ರಾಜ್ಯ

ಬೆಳಗಾವಿ: 2 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ; ತೀವ್ರ ಗಾಯ

ದಾಳಿಗೆ ಕಾರಣವಾದ ಬೀದಿ ನಾಯಿಯನ್ನು ಸೆರೆಹಿಡಿದು ಶ್ರೀನಗರದ ಎಬಿಸಿ ಕೇಂದ್ರದಲ್ಲಿ ವೀಕ್ಷಣೆಯಲ್ಲಿ ಇರಿಸಲಾಗಿದೆ.

ಬೆಳಗಾವಿ: ಬೆಳಗಾವಿಯಲ್ಲಿ ಬೀದಿನಾಯಿಗಳ ಅಟ್ಟಹಾಸಕ್ಕೆ 2 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಬಾಲಕಿಯ ಮುಖದ ಮೇಲೆ ತೀವ್ರ ಗಾಯಗಳಾಗಿವೆ.

ಹೌದು.. ಬೆಳಗಾವಿಯಲ್ಲಿ ಎರಡು ವರ್ಷದ ಬಾಲಕಿ ಮೇಲೆ ಬೀದಿನಾಯಿಯೊಂದು ದಾಳಿ ಮಾಡಿದ್ದು, ದಾಳಿಯಿಂದಾಗಿ ಬಾಲಕಿಯ ಮುಖಕ್ಕೆ ತೀವ್ರಗಾಯಗಳಾಗಿವೆ.

ಗುರುವಾರ ಬೆಳಗಾವಿಯ ಮಾರುತಿ ನಗರದಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಯೊಂದು ಎರಡು ವರ್ಷದ ಬಾಲಕಿಯ ಮೇಲೆ ದಾಳಿ ಮಾಡಿದ ಪರಿಣಾಮ ಆಕೆಯ ಮುಖಕ್ಕೆ ತೀವ್ರ ಗಾಯಗಳಾಗಿವೆ.

ಒಂದು ವರ್ಷ ಹತ್ತು ತಿಂಗಳ ವಯಸ್ಸಿನ ಆರಾಧ್ಯ ಉಮೇಶ್ ಟಾರ್ಗರ್ ಎಂಬ ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಾಗ ಬೀದಿ ನಾಯಿಯೊಂದು ಆಕೆಯ ಮೇಲೆ ದಾಳಿ ಮಾಡಿತು.

ಈ ವೇಳೆ ಬಾಲಕಿಯ ಹಣೆ, ಕೆನ್ನೆ ಮತ್ತು ತುಟಿಗೆ ಕಚ್ಚಿದ್ದರಿಂದ ಬಾಯಿ ಗಲ್ಲದವರೆಗೆ ಹರಿದು ತೀವ್ರ ರಕ್ತಸ್ರಾವವಾಯಿತು. ಸ್ಥಳೀಯರು ಮತ್ತು ಮಗುವಿನ ತಾಯಿ ಆಕೆಯ ಸಹಾಯಕ್ಕೆ ಧಾವಿಸಿ ನಾಯಿಯನ್ನು ಓಡಿಸುವಲ್ಲಿ ಯಶಸ್ವಿಯಾದರು.

ಬಳಿಕ ಮಗು ಆರಾಧ್ಯಳನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಕುಟುಂಬಕ್ಕೆ ವೈದ್ಯರು ಸಲಹೆ ನೀಡಿದರು.

ವೈದ್ಯರ ವಿರುದ್ಧ ಸ್ಥಳೀಯರ ಆಕ್ರೋಶ

ಇನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಸೌಲಭ್ಯವನ್ನು ಇತ್ತೀಚೆಗೆ ಉದ್ಘಾಟಿಸಲಾಗಿತ್ತು. ಆದಾಗ್ಯೂ ಆಸ್ಪತ್ರೆ ಸಿಬ್ಬಂದಿ ತಕ್ಷಣದ ಆರೈಕೆ ನೀಡುವ ಬದಲು, ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಕುಟುಂಬಕ್ಕೆ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ ಮಗುವಿಗೆ ಚಿಕಿತ್ಸೆ ನೀಡಲು ಆಸ್ಪತ್ರೆ ನಿರಾಕರಿಸಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಆಸ್ಪತ್ರೆಯಿಂದ ಬಂದ ಶಿಫಾರಸ್ಸು ಪತ್ರದ ನಂತರ, ಬಾಲಕಿಯನ್ನು ಕೊನೆಗೆ ನೆಹರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಮುಖದ ಮೇಲೆ ಬಿದ್ದಿದ್ದ ವ್ಯಾಪಕ ಗಾಯಗಳಿಗೆ ವೈದ್ಯರು ಪ್ಲಾಸ್ಟಿಕ್ ಸರ್ಜರಿ ಮಾಡಬೇಕೆಂದು ಸಲಹೆ ನೀಡಿದ್ದಾರೆ, ಇದರ ಅಂದಾಜು ವೆಚ್ಚ 1.5 ರಿಂದ 2 ಲಕ್ಷ ರೂ.ಗಳಷ್ಟಿದೆ. ಆಕೆಯ ಕುಟುಂಬದ ಸಂಬಂಧಿಕರು ಹಣ ಹೊಂದಿಸಲು ಕಷ್ಟಪಡುತ್ತಿದ್ದಾರೆ.

ಈ ಮಧ್ಯೆ, ದಾಳಿಗೆ ಕಾರಣವಾದ ಬೀದಿ ನಾಯಿಯನ್ನು ಸೆರೆಹಿಡಿದು ಶ್ರೀನಗರದ ಎಬಿಸಿ ಕೇಂದ್ರದಲ್ಲಿ ವೀಕ್ಷಣೆಯಲ್ಲಿ ಇರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel