ಬೆಳಗಾವಿಯಲ್ಲಿ ಬೀದಿನಾಯಿ ದಾಳಿ (ಸಾಂದರ್ಭಿಕ ಚಿತ್ರ) 
ರಾಜ್ಯ

ಬೆಳಗಾವಿ: 2 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ; ತೀವ್ರ ಗಾಯ

ದಾಳಿಗೆ ಕಾರಣವಾದ ಬೀದಿ ನಾಯಿಯನ್ನು ಸೆರೆಹಿಡಿದು ಶ್ರೀನಗರದ ಎಬಿಸಿ ಕೇಂದ್ರದಲ್ಲಿ ವೀಕ್ಷಣೆಯಲ್ಲಿ ಇರಿಸಲಾಗಿದೆ.

ಬೆಳಗಾವಿ: ಬೆಳಗಾವಿಯಲ್ಲಿ ಬೀದಿನಾಯಿಗಳ ಅಟ್ಟಹಾಸಕ್ಕೆ 2 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಬಾಲಕಿಯ ಮುಖದ ಮೇಲೆ ತೀವ್ರ ಗಾಯಗಳಾಗಿವೆ.

ಹೌದು.. ಬೆಳಗಾವಿಯಲ್ಲಿ ಎರಡು ವರ್ಷದ ಬಾಲಕಿ ಮೇಲೆ ಬೀದಿನಾಯಿಯೊಂದು ದಾಳಿ ಮಾಡಿದ್ದು, ದಾಳಿಯಿಂದಾಗಿ ಬಾಲಕಿಯ ಮುಖಕ್ಕೆ ತೀವ್ರಗಾಯಗಳಾಗಿವೆ.

ಗುರುವಾರ ಬೆಳಗಾವಿಯ ಮಾರುತಿ ನಗರದಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಯೊಂದು ಎರಡು ವರ್ಷದ ಬಾಲಕಿಯ ಮೇಲೆ ದಾಳಿ ಮಾಡಿದ ಪರಿಣಾಮ ಆಕೆಯ ಮುಖಕ್ಕೆ ತೀವ್ರ ಗಾಯಗಳಾಗಿವೆ.

ಒಂದು ವರ್ಷ ಹತ್ತು ತಿಂಗಳ ವಯಸ್ಸಿನ ಆರಾಧ್ಯ ಉಮೇಶ್ ಟಾರ್ಗರ್ ಎಂಬ ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಾಗ ಬೀದಿ ನಾಯಿಯೊಂದು ಆಕೆಯ ಮೇಲೆ ದಾಳಿ ಮಾಡಿತು.

ಈ ವೇಳೆ ಬಾಲಕಿಯ ಹಣೆ, ಕೆನ್ನೆ ಮತ್ತು ತುಟಿಗೆ ಕಚ್ಚಿದ್ದರಿಂದ ಬಾಯಿ ಗಲ್ಲದವರೆಗೆ ಹರಿದು ತೀವ್ರ ರಕ್ತಸ್ರಾವವಾಯಿತು. ಸ್ಥಳೀಯರು ಮತ್ತು ಮಗುವಿನ ತಾಯಿ ಆಕೆಯ ಸಹಾಯಕ್ಕೆ ಧಾವಿಸಿ ನಾಯಿಯನ್ನು ಓಡಿಸುವಲ್ಲಿ ಯಶಸ್ವಿಯಾದರು.

ಬಳಿಕ ಮಗು ಆರಾಧ್ಯಳನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಕುಟುಂಬಕ್ಕೆ ವೈದ್ಯರು ಸಲಹೆ ನೀಡಿದರು.

ವೈದ್ಯರ ವಿರುದ್ಧ ಸ್ಥಳೀಯರ ಆಕ್ರೋಶ

ಇನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಸೌಲಭ್ಯವನ್ನು ಇತ್ತೀಚೆಗೆ ಉದ್ಘಾಟಿಸಲಾಗಿತ್ತು. ಆದಾಗ್ಯೂ ಆಸ್ಪತ್ರೆ ಸಿಬ್ಬಂದಿ ತಕ್ಷಣದ ಆರೈಕೆ ನೀಡುವ ಬದಲು, ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಕುಟುಂಬಕ್ಕೆ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ ಮಗುವಿಗೆ ಚಿಕಿತ್ಸೆ ನೀಡಲು ಆಸ್ಪತ್ರೆ ನಿರಾಕರಿಸಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಆಸ್ಪತ್ರೆಯಿಂದ ಬಂದ ಶಿಫಾರಸ್ಸು ಪತ್ರದ ನಂತರ, ಬಾಲಕಿಯನ್ನು ಕೊನೆಗೆ ನೆಹರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಮುಖದ ಮೇಲೆ ಬಿದ್ದಿದ್ದ ವ್ಯಾಪಕ ಗಾಯಗಳಿಗೆ ವೈದ್ಯರು ಪ್ಲಾಸ್ಟಿಕ್ ಸರ್ಜರಿ ಮಾಡಬೇಕೆಂದು ಸಲಹೆ ನೀಡಿದ್ದಾರೆ, ಇದರ ಅಂದಾಜು ವೆಚ್ಚ 1.5 ರಿಂದ 2 ಲಕ್ಷ ರೂ.ಗಳಷ್ಟಿದೆ. ಆಕೆಯ ಕುಟುಂಬದ ಸಂಬಂಧಿಕರು ಹಣ ಹೊಂದಿಸಲು ಕಷ್ಟಪಡುತ್ತಿದ್ದಾರೆ.

ಈ ಮಧ್ಯೆ, ದಾಳಿಗೆ ಕಾರಣವಾದ ಬೀದಿ ನಾಯಿಯನ್ನು ಸೆರೆಹಿಡಿದು ಶ್ರೀನಗರದ ಎಬಿಸಿ ಕೇಂದ್ರದಲ್ಲಿ ವೀಕ್ಷಣೆಯಲ್ಲಿ ಇರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SCROLL FOR NEXT