ರಾಜ್ಯ

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ನಿನ್ನೆ ಲಾಲ್ ಬಾಗ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಆರಂಭಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಜೆಪಿ ಪಾರ್ಕ್ ನಲ್ಲಿ ಅಹವಾಲನ್ನು ಸ್ವೀಕರಿಸಿದರು.

ಬೆಂಗಳೂರು: ಬೆಂಗಳೂರಿನ ಮತ್ತೀಕೆರೆಯ ಜೆಪಿ ಪಾರ್ಕ್ ನಲ್ಲಿ ನಡೆದ ಬೆಂಗಳೂರು ನಡಿಗೆ ಕಾರ್ಯಾಕ್ರಮದ ವೇಳೆ ದೊಡ್ಡ ಹೈಡ್ರಾಮಾ ನಡೆಯಿತು. ನಿನ್ನೆ ಲಾಲ್ ಬಾಗ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಆರಂಭಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಜೆಪಿ ಪಾರ್ಕ್ ನಲ್ಲಿ ಅಹವಾಲನ್ನು ಸ್ವೀಕರಿಸಿದರು. ಈ ವೇಳೆ ಅಲ್ಲಿಗೆ ಬಂದ ಬಿಜೆಪಿ ಶಾಸಕ ಮುನಿರತ್ನ ಸ್ಥಳೀಯ ಶಾಸಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಕಾರ್ಯಕ್ರಮದ ಬ್ಯಾನರ್ ನಲ್ಲಿ ಶಾಸಕ ಹಾಗೂ ಸಂಸದರ ಫೋಟೋ ಹಾಕಿಲ್ಲ. ಇದು ಸರ್ಕಾರಿ ಕಾರ್ಯಕ್ರಮವೋ ಅಥವಾ ಕಾಂಗ್ರೆಸ್ ಕಾರ್ಯಕ್ರಮವೋ ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತರನ್ನು ಮುನಿರತ್ನ ಪ್ರಶ್ನಿಸಿದರು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ವಿರುದ್ಧ ಘೋಷಣೆ ಕೂಗಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮೀಲಾಯಿಸುವ ಹಂತಕ್ಕೆ ಹೋದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಮುನಿರತ್ನರನ್ನು ವೇದಿಕೆಯಿಂದ ಕರೆದುಕೊಂಡು ಹೋದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ HMT ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಣ್ಣ ಎಂಬಾತ ಮುನಿರತ್ನ ಧರಿಸಿದ್ದ RSS ಟೋಪಿಯನ್ನು ಕಿತ್ತೆಸೆದಿರುವ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026: ಮಕಾಡೆ ಮಲಗಿದ USA ಬ್ಯಾಟಿಂಗ್; ಭಾರತಕ್ಕೆ ಭರ್ಜರಿ ಜಯ, ಶುಭಾರಂಭ!

T20 ವಿಶ್ವಕಪ್ 2026: USA ವಿರುದ್ಧ ಸೂರ್ಯ ಭರ್ಜರಿ ಬ್ಯಾಟಿಂಗ್; Babar Azam ದಾಖಲೆ ಧ್ವಂಸ

T20 ವಿಶ್ವಕಪ್ 2026: ಕೊನೆಗೂ Virat Kohli ದಾಖಲೆ ಮುರಿದ ಸೂರ್ಯ ಕುಮಾರ್ ಯಾದವ್!

T20 ವಿಶ್ವಕಪ್ 2026: ಅಮೆರಿಕ ವಿರುದ್ಧ ಗೋಲ್ಡನ್ ಡಕೌಟ್; ಕಳಪೆ ದಾಖಲೆ ಬರೆದ Abhishek Sharma!

ನಂಬಿಕೆಯೇ ಭಾರತದ ಬಲಿಷ್ಠ ಕರೆನ್ಸಿ: ಮಲೇಷ್ಯಾದಲ್ಲಿ ಪ್ರಧಾನಿ ಮೋದಿ

SCROLL FOR NEXT