ರಾಜ್ಯ

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ನಿನ್ನೆ ಲಾಲ್ ಬಾಗ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಆರಂಭಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಜೆಪಿ ಪಾರ್ಕ್ ನಲ್ಲಿ ಅಹವಾಲನ್ನು ಸ್ವೀಕರಿಸಿದರು.

ಬೆಂಗಳೂರು: ಬೆಂಗಳೂರಿನ ಮತ್ತೀಕೆರೆಯ ಜೆಪಿ ಪಾರ್ಕ್ ನಲ್ಲಿ ನಡೆದ ಬೆಂಗಳೂರು ನಡಿಗೆ ಕಾರ್ಯಾಕ್ರಮದ ವೇಳೆ ದೊಡ್ಡ ಹೈಡ್ರಾಮಾ ನಡೆಯಿತು. ನಿನ್ನೆ ಲಾಲ್ ಬಾಗ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಆರಂಭಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಜೆಪಿ ಪಾರ್ಕ್ ನಲ್ಲಿ ಅಹವಾಲನ್ನು ಸ್ವೀಕರಿಸಿದರು. ಈ ವೇಳೆ ಅಲ್ಲಿಗೆ ಬಂದ ಬಿಜೆಪಿ ಶಾಸಕ ಮುನಿರತ್ನ ಸ್ಥಳೀಯ ಶಾಸಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಕಾರ್ಯಕ್ರಮದ ಬ್ಯಾನರ್ ನಲ್ಲಿ ಶಾಸಕ ಹಾಗೂ ಸಂಸದರ ಫೋಟೋ ಹಾಕಿಲ್ಲ. ಇದು ಸರ್ಕಾರಿ ಕಾರ್ಯಕ್ರಮವೋ ಅಥವಾ ಕಾಂಗ್ರೆಸ್ ಕಾರ್ಯಕ್ರಮವೋ ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತರನ್ನು ಮುನಿರತ್ನ ಪ್ರಶ್ನಿಸಿದರು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ವಿರುದ್ಧ ಘೋಷಣೆ ಕೂಗಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮೀಲಾಯಿಸುವ ಹಂತಕ್ಕೆ ಹೋದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಮುನಿರತ್ನರನ್ನು ವೇದಿಕೆಯಿಂದ ಕರೆದುಕೊಂಡು ಹೋದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ HMT ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಣ್ಣ ಎಂಬಾತ ಮುನಿರತ್ನ ಧರಿಸಿದ್ದ RSS ಟೋಪಿಯನ್ನು ಕಿತ್ತೆಸೆದಿರುವ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ': Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

SCROLL FOR NEXT