ರಾಜ್ಯ

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ನಿನ್ನೆ ಲಾಲ್ ಬಾಗ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಆರಂಭಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಜೆಪಿ ಪಾರ್ಕ್ ನಲ್ಲಿ ಅಹವಾಲನ್ನು ಸ್ವೀಕರಿಸಿದರು.

ಬೆಂಗಳೂರು: ಬೆಂಗಳೂರಿನ ಮತ್ತೀಕೆರೆಯ ಜೆಪಿ ಪಾರ್ಕ್ ನಲ್ಲಿ ನಡೆದ ಬೆಂಗಳೂರು ನಡಿಗೆ ಕಾರ್ಯಾಕ್ರಮದ ವೇಳೆ ದೊಡ್ಡ ಹೈಡ್ರಾಮಾ ನಡೆಯಿತು. ನಿನ್ನೆ ಲಾಲ್ ಬಾಗ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಆರಂಭಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಜೆಪಿ ಪಾರ್ಕ್ ನಲ್ಲಿ ಅಹವಾಲನ್ನು ಸ್ವೀಕರಿಸಿದರು. ಈ ವೇಳೆ ಅಲ್ಲಿಗೆ ಬಂದ ಬಿಜೆಪಿ ಶಾಸಕ ಮುನಿರತ್ನ ಸ್ಥಳೀಯ ಶಾಸಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ಕಾರ್ಯಕ್ರಮದ ಬ್ಯಾನರ್ ನಲ್ಲಿ ಶಾಸಕ ಹಾಗೂ ಸಂಸದರ ಫೋಟೋ ಹಾಕಿಲ್ಲ. ಇದು ಸರ್ಕಾರಿ ಕಾರ್ಯಕ್ರಮವೋ ಅಥವಾ ಕಾಂಗ್ರೆಸ್ ಕಾರ್ಯಕ್ರಮವೋ ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತರನ್ನು ಮುನಿರತ್ನ ಪ್ರಶ್ನಿಸಿದರು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ವಿರುದ್ಧ ಘೋಷಣೆ ಕೂಗಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮೀಲಾಯಿಸುವ ಹಂತಕ್ಕೆ ಹೋದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಮುನಿರತ್ನರನ್ನು ವೇದಿಕೆಯಿಂದ ಕರೆದುಕೊಂಡು ಹೋದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ HMT ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಣ್ಣ ಎಂಬಾತ ಮುನಿರತ್ನ ಧರಿಸಿದ್ದ RSS ಟೋಪಿಯನ್ನು ಕಿತ್ತೆಸೆದಿರುವ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್