ಸಂಗ್ರಹ ಚಿತ್ರ 
ರಾಜ್ಯ

ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ: ಮೃತರ ಸಂಖ್ಯೆ 6ಕ್ಕೆ ಏರಿಕೆ

ಅಡುಗೆ ಮಾಡಿದ ನಂತರ ಶೆಡ್‌ನೊಳಗಿನ ಎಲ್‌ಪಿಜಿ ಸಿಲಿಂಡರ್ ಅನ್ನು ಸರಿಯಾಗಿ ಆಫ್ ಮಾಡದ ಕಾರಣ ಅನಿಲ ಸೋರಿಕೆಯಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಬೆಂಗಳೂರು: ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ಭೀಮೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಈ ದುರ್ಘಟನೆ ಅಕ್ಟೋಬರ್ 7ರಂದು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಭೀಮನಹಳ್ಳಿ ಸಮೀಪದ ಶೆಡ್‌ನಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ 7 ಕಾರ್ಮಿಕರು ಈ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ಮೃತರನ್ನು ಮನಾರುಲ್ ಶೇಖ್ (40), ತಜಬುಲ್ ಶೇಖ್ (26), ಜಹೇದ್ ಅಲಿ (32), ಹಸನ್ ಮಲಿಕ್ (42), ಜಿಯಾಬುರ್ ಶೇಖ್ (40), ಮತ್ತು ಶಫಿಜುಲ್ ಶೇಖ್ (36) ಎಂದು ಗುರ್ತಿಸಲಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ನೂರ್ ಜಮಾಲ್ (21) ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇವರೆಲ್ಲರೂ ಪಶ್ಚಿಮ ಬಂಗಾಳದವರಾಗಿದ್ದು, ನಿರ್ಮಾಣ ಸ್ಥಳದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ, ಊಟದ ನಂತರ ಕಾರ್ಮಿಕರು ಮಲಗಿದ್ದ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅಡುಗೆ ಮಾಡಿದ ನಂತರ ಶೆಡ್‌ನೊಳಗಿನ ಎಲ್‌ಪಿಜಿ ಸಿಲಿಂಡರ್ ಅನ್ನು ಸರಿಯಾಗಿ ಆಫ್ ಮಾಡದ ಕಾರಣ ಅನಿಲ ಸೋರಿಕೆಯಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಈ ನಡುವೆ ರಾತ್ರಿ ವೇಳೆ ಕಾರ್ಮಿಕರಲ್ಲಿ ಒಬ್ಬರು ಸಿಗರೇಟ್ ಹಚ್ಚಿದಾಗ, ಅದು ಸ್ಫೋಟ ಮತ್ತು ಬೆಂಕಿಗೆ ಕಾರಣವಾಯಿತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಭೂಮಾಲೀಕರು, ಸೈಟ್ ಎಂಜಿನಿಯರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

SCROLL FOR NEXT