ಸಂಗ್ರಹ ಚಿತ್ರ 
ರಾಜ್ಯ

ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ: ಮೃತರ ಸಂಖ್ಯೆ 6ಕ್ಕೆ ಏರಿಕೆ

ಅಡುಗೆ ಮಾಡಿದ ನಂತರ ಶೆಡ್‌ನೊಳಗಿನ ಎಲ್‌ಪಿಜಿ ಸಿಲಿಂಡರ್ ಅನ್ನು ಸರಿಯಾಗಿ ಆಫ್ ಮಾಡದ ಕಾರಣ ಅನಿಲ ಸೋರಿಕೆಯಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಬೆಂಗಳೂರು: ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ಭೀಮೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಈ ದುರ್ಘಟನೆ ಅಕ್ಟೋಬರ್ 7ರಂದು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಭೀಮನಹಳ್ಳಿ ಸಮೀಪದ ಶೆಡ್‌ನಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ 7 ಕಾರ್ಮಿಕರು ಈ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ಮೃತರನ್ನು ಮನಾರುಲ್ ಶೇಖ್ (40), ತಜಬುಲ್ ಶೇಖ್ (26), ಜಹೇದ್ ಅಲಿ (32), ಹಸನ್ ಮಲಿಕ್ (42), ಜಿಯಾಬುರ್ ಶೇಖ್ (40), ಮತ್ತು ಶಫಿಜುಲ್ ಶೇಖ್ (36) ಎಂದು ಗುರ್ತಿಸಲಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ನೂರ್ ಜಮಾಲ್ (21) ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇವರೆಲ್ಲರೂ ಪಶ್ಚಿಮ ಬಂಗಾಳದವರಾಗಿದ್ದು, ನಿರ್ಮಾಣ ಸ್ಥಳದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ, ಊಟದ ನಂತರ ಕಾರ್ಮಿಕರು ಮಲಗಿದ್ದ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅಡುಗೆ ಮಾಡಿದ ನಂತರ ಶೆಡ್‌ನೊಳಗಿನ ಎಲ್‌ಪಿಜಿ ಸಿಲಿಂಡರ್ ಅನ್ನು ಸರಿಯಾಗಿ ಆಫ್ ಮಾಡದ ಕಾರಣ ಅನಿಲ ಸೋರಿಕೆಯಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಈ ನಡುವೆ ರಾತ್ರಿ ವೇಳೆ ಕಾರ್ಮಿಕರಲ್ಲಿ ಒಬ್ಬರು ಸಿಗರೇಟ್ ಹಚ್ಚಿದಾಗ, ಅದು ಸ್ಫೋಟ ಮತ್ತು ಬೆಂಕಿಗೆ ಕಾರಣವಾಯಿತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಭೂಮಾಲೀಕರು, ಸೈಟ್ ಎಂಜಿನಿಯರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ- ಅಶ್ವಿನಿ ವೈಷ್ಣವ್

ಮಗನಿಗೆ ಸಿದ್ದರಾಮಯ್ಯ ಮೂಗುದಾರ: ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಲ್ಲ ಎಂದ MLC ಯತೀಂದ್ರ!

ಭಾರತದ ಸಪ್ತ ಸಹೋದರಿಯರು: ಮತ್ತೆ ಪ್ರಸ್ತಾಪಿಸಿ ಮೊಹಮ್ಮದ್ ಯೂನಸ್ ವಿವಾದಕ್ಕೆ ಗುರಿ!

ಕರ್ನಾಟಕದ ಯಾವ ಶಾಸಕನಿಗೂ ಕ್ಷೇತ್ರದ ಅಭಿವೃದ್ಧಿಯನ್ನು ಸೋಮಣ್ಣನ ತರ ಮಾಡೋಕೆ ಸಾಧ್ಯವಿಲ್ಲ: ಸಚಿವ ಜಮೀರ್ ಪ್ರಶಂಸೆ

SCROLL FOR NEXT