ಸಿ ಮಂಜುಳಾ 
ರಾಜ್ಯ

NCW ಕರ್ನಾಟಕ ಭೇಟಿಗೆ ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ! ಕಾರಣವೇನು?

ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗೃಹ ಇಲಾಖೆಗಳು ಸಂಪೂರ್ಣವಾಗಿ ವಿಫಲವಾಗಿವೆ

ಬೆಂಗಳೂರು: ಮೇ 2023 ರಿಂದ ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲದಂತಾಗಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಆರೋಪಿಸಿದ್ದು, ರಾಜ್ಯಕ್ಕೆ ಭೇಟಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗವನ್ನು (ಎನ್‌ಸಿಡಬ್ಲ್ಯೂ) ಒತ್ತಾಯಿಸಿದೆ.

ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ ಮಂಜುಳಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅತ್ಯಾಚಾರ, ಕೊಲೆ, ಬಾಣಂತಿಯರ ಸಾವುಗಳು ಮತ್ತು ಪೋಕ್ಸೊ ಪ್ರಕರಣಗಳು ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.

ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗೃಹ ಇಲಾಖೆಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಅವರು ಟೀಕಿಸಿದ್ದಾರೆ.

ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಶಕ್ತಿ ಯೋಜನೆ ಸಂಪೂರ್ಣವಾಗಿ ವೈಫಲ್ಯಕ್ಕೊಳಗಾಗಿದೆ ಎಂಬ ಹೇಳಿಕೆ ಸೇರಿದಂತೆ 18 ಘಟನೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರೂರ್ ಕಾಲ್ತುಳಿತ ಪ್ರಕರಣ ಸಿಬಿಐಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

Israel-Gaza war: 7 ಒತ್ತೆಯಾಳುಗಳ ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್, ಯುದ್ಧ ಅಂತ್ಯ ಎಂದು ಟ್ರಂಪ್ ಘೋಷಣೆ

ಸಮೀಕ್ಷೆಗೆ ಸಿಬ್ಬಂದಿ ನಿಯೋಜನೆ: ತುರ್ತು ಪರಿಸ್ಥಿತಿ ನಿಭಾಯಿಸುವುದೇ ಸವಾಲು: ಗ್ರೆಟರ್ ಬೆಂಗಳೂರು ಪ್ರಾಧಿಕಾರ

Tamil Nadu: ವಿಷಯುಕ್ತ 'ಕೋಲ್ಡ್ರಿಫ್' ಸಿರಫ್ : ಸ್ರೆಸನ್ ಫಾರ್ಮಾ ಕಂಪನಿಯ ಲೈಸನ್ಸ್ ರದ್ದುಗೊಳಿಸಿ, ಬಾಗಿಲು ಮುಚ್ಚಿಸಿದ ಸ್ಟಾಲಿನ್ ಸರ್ಕಾರ!

IRCTC case: ಬಿಹಾರ ಚುನಾವಣೆ ಸನಿಹದಲ್ಲಿ ಆರ್ ಜೆಡಿಗೆ 'ಬಿಗ್ ಶಾಕ್' ನೀಡಿದ ದೆಹಲಿ ನ್ಯಾಯಾಲಯ!

SCROLL FOR NEXT