ಸಿಎಂ ಸಿದ್ದರಾಮಯ್ಯ 
ರಾಜ್ಯ

ಕಿತ್ತೂರು ಉತ್ಸವದ ಜ್ಯೋತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ!

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ರೋಷನ್ ಬೇಗ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಬೆಂಗಳೂರು: ಐತಿಹಾಸಿಕ ಕಿತ್ತೂರು ಉತ್ಸವದ ಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಉತ್ಸವಕ್ಕೆ ಚಾಲನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಚೆನ್ನಮ್ಮನ ಕಿತ್ತೂರು ಶಾಸಕ‌ ಬಾಬಾಸಾಹೇಬ್ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.

ಬಿಹಾರ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ನಾಯಕತ್ವ ಬದಲಾವಣೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಪ್ರಶ್ನಿಸಿದರು.

ನಾವು ಯಾವಾಗಲೂ ಭೇಟಿಯಾಗುತ್ತಲೇ ಇರುತ್ತೇವೆ. ನಮ್ಮ 'ಡಿನ್ನರ್ ಮೀಟಿಂಗ್'ಗೆ ವಿಶೇಷ ಅರ್ಥ ಕಲ್ಪಿಸುವುದನ್ನು ತಳ್ಳಿಹಾಕಿದರು. ಆದರೆ, ರಾಜ್ಯ ಸರ್ಕಾರವು ಎರಡೂವರೆ ವರ್ಷಗಳ ಆಡಳಿತವನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಮತ್ತು ನಾಯಕತ್ವ ಬದಲಾವಣೆಯ ಗುಸುಗುಸು ದಟ್ಟವಾಗಿರುವ ಸಂದರ್ಭದಲ್ಲಿ ಈ ಔತಣಕೂಟವನ್ನು ಕರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ‘ದಿಕ್ಕು ತಪ್ಪಿಸುವ ಅಸ್ತ್ರ’; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿ

ಇದೇ ಮೊದಲು, ಶತ್ರು ರಾಷ್ಟ್ರದ ಪ್ರಾಂತ್ಯದಲ್ಲಿ ಇಬ್ಬರು US ಪೈಲಟ್‌ ರಕ್ಷಣೆ, ಡೊನಾಲ್ಡ್ ಟ್ರಂಪ್!

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

SCROLL FOR NEXT