ಸಿಎಂ ಸಿದ್ದರಾಮಯ್ಯ 
ರಾಜ್ಯ

ಕಿತ್ತೂರು ಉತ್ಸವದ ಜ್ಯೋತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ!

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ರೋಷನ್ ಬೇಗ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಬೆಂಗಳೂರು: ಐತಿಹಾಸಿಕ ಕಿತ್ತೂರು ಉತ್ಸವದ ಜ್ಯೋತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸಿ, ಉತ್ಸವಕ್ಕೆ ಚಾಲನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಚೆನ್ನಮ್ಮನ ಕಿತ್ತೂರು ಶಾಸಕ‌ ಬಾಬಾಸಾಹೇಬ್ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.

ಬಿಹಾರ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ನಾಯಕತ್ವ ಬದಲಾವಣೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಪ್ರಶ್ನಿಸಿದರು.

ನಾವು ಯಾವಾಗಲೂ ಭೇಟಿಯಾಗುತ್ತಲೇ ಇರುತ್ತೇವೆ. ನಮ್ಮ 'ಡಿನ್ನರ್ ಮೀಟಿಂಗ್'ಗೆ ವಿಶೇಷ ಅರ್ಥ ಕಲ್ಪಿಸುವುದನ್ನು ತಳ್ಳಿಹಾಕಿದರು. ಆದರೆ, ರಾಜ್ಯ ಸರ್ಕಾರವು ಎರಡೂವರೆ ವರ್ಷಗಳ ಆಡಳಿತವನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಮತ್ತು ನಾಯಕತ್ವ ಬದಲಾವಣೆಯ ಗುಸುಗುಸು ದಟ್ಟವಾಗಿರುವ ಸಂದರ್ಭದಲ್ಲಿ ಈ ಔತಣಕೂಟವನ್ನು ಕರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್