ಪ್ರತಾಪ್ ಸಿಂಹ- ಪ್ರದೀಪ್ ಈಶ್ವರ್  online desk
ರಾಜ್ಯ

ಯತ್ನಾಳ್-ಸಿಂಹ ವಿರುದ್ಧ ಕಟು ಟೀಕೆ; ಕೈ ಶಾಸಕ ಪ್ರದೀಪ್ ಈಶ್ವರ್ ಗೆ ಜನರಿಂದಲೇ ತರಾಟೆ: "ಕಾಮೆಂಟ್ಸ್ ನೋಡಿದರೆ ಹುಚ್ಚ ಆಗೋದು ಗ್ಯಾರೆಂಟಿ"- ಪ್ರತಾಪ್ ಟಾಂಗ್

ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದ ಮಾಧ್ಯವೊಂದರ ಸಾಮಾಜಿಕ ಜಾಲತಾಣ ಪೇಜ್ ನಲ್ಲಿ ಜನರು ಪ್ರದೀಪ್ ಈಶ್ವರ್ ಅವರನ್ನು ಕಾಮೆಂಟ್ ವಿಭಾಗದಲ್ಲಿ ತರಾಟೆಗೆ ತೆಗೆದುಕೊಂಡಿದ್ದು, ಹಿಗ್ಗಾ-ಮುಗ್ಗಾ ಝಾಡಿಸಿದ್ದಾರೆ.

ಬೆಂಗಳೂರು: ಯಾವುದೇ ವರ್ಗಾವಣೆ ಆಗ ಬೇಕಾದರೆ ಸಿಎಂ ಪುತ್ರನಿಗೆ ತೆರಿಗೆ ಕಟ್ಟ ಬೇಕು ಎಂದು ಆರೋಪಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಟೀಕೆ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನ್ನು ಸಾಮಾಜಿಕ ಜಾಲತಾಣದಲ್ಲಿ ಜನರೇ ತರಾಟೆಗೆ ತೆಗೆದುಕೊಂಡಿದ್ದಾರೆ.

"ಮೈಸೂರಿನ ಮಾಜಿ ಸಂಸದ ಮಿಸ್ಟರ್ ಅವಿವೇಕಿ ಪ್ರತಾಪ್ ಸಿಂಹ ಅವರು ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡಿದ್ದರು, ನೀವು ಸಿದ್ದರಾಮಯ್ಯ ಕಾಲಿನ ಧೂಳಿಗೂ ಸಮವಲ್ಲ, ಸಿಎಂ ಪುತ್ರ ಯತೀಂದ್ರ ಟ್ಯಾಕ್ಸ್ ಬಗ್ಗೆ ಮಾತನಾಡುವುದಕ್ಕೂ ಮೊದಲು ಆರ್ ಅಶೋಕ್ ಟ್ಯಾಕ್ಸ್, ವಿಜಯಪುರದಲ್ಲಿ ಯತ್ನಾಳ್ ಟ್ಯಾಕ್ಸ್ ಬಗ್ಗೆಯೂ ಪ್ರತಾಪ್ ಸಿಂಹ ಮಾತನಾಡಲಿ" ಎಂದು ಮಾಧ್ಯಮಗಳಿಗೆ ಪ್ರದೀಪ್ ಈಶ್ವರ್ ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದ ಮಾಧ್ಯವೊಂದರ ಸಾಮಾಜಿಕ ಜಾಲತಾಣ ಪೇಜ್ ನಲ್ಲಿ ಜನರು ಪ್ರದೀಪ್ ಈಶ್ವರ್ ಅವರನ್ನು ಕಾಮೆಂಟ್ ವಿಭಾಗದಲ್ಲಿ ತರಾಟೆಗೆ ತೆಗೆದುಕೊಂಡಿದ್ದು, ಹಿಗ್ಗಾ-ಮುಗ್ಗಾ ಝಾಡಿಸಿದ್ದಾರೆ.

ಮಾತಿನ ಮೇಲೆ ಹಿಡಿತವಿಲ್ಲದ ಈ ಶಾಸಕನ ಮಾತು ಕೇಳಿ ಪಾಠ ಕಲಿಯುವ ವಿದ್ಯಾರ್ಥಿಗಳಿಗೆ ಕತೆಯನ್ನು ದೇವರೇ ಕಾಪಾಡಬೇಕು ಎಂದು ವ್ಯಕ್ತಿಯೋರ್ವರು ಕಾಮೆಂಟ್ ಮಾಡಿದ್ದಾರೆ. ಸಾವಿರಾರು ಕಾಮೆಂಟ್ ಗಳು ಪ್ರದೀಪ್ ಈಶ್ವರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು ಮೊದಲು ರಸ್ತೆ ದುರಸ್ತಿ ಮಾಡಿಸಿ ಆ ನಂತರ ಟ್ಯಾಕ್ಸ್ ಬಗ್ಗೆ ಮಾತನಾಡಿ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಜನರ ಕಾಮೆಂಟ್ ಗಳನ್ನು ಗಮನಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ ಕಾಮೆಂಟ್ ಗಳ ಸ್ಕ್ರೀನ್ ಶಾಟ್ ನ್ನು ಹಂಚಿಕೊಂಡಿದ್ದು, ವರದಿಯ ಕೆಳಗಿರುವ ಕಾಮೆಂಟ್ ಗಳನ್ನು ನೋಡಿದರೆ ಇವನು ಮೆಂಟಲ್ ಆಗುವುದು ಗ್ಯಾರಂಟಿ! ಎಂದು ಪ್ರದೀಪ್ ಈಶ್ವರ್ ಗೆ ಟಾಂಗ್ ಕೊಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel