ಪ್ರತಾಪ್ ಸಿಂಹ- ಪ್ರದೀಪ್ ಈಶ್ವರ್  online desk
ರಾಜ್ಯ

ಯತ್ನಾಳ್-ಸಿಂಹ ವಿರುದ್ಧ ಕಟು ಟೀಕೆ; ಕೈ ಶಾಸಕ ಪ್ರದೀಪ್ ಈಶ್ವರ್ ಗೆ ಜನರಿಂದಲೇ ತರಾಟೆ: "ಕಾಮೆಂಟ್ಸ್ ನೋಡಿದರೆ ಹುಚ್ಚ ಆಗೋದು ಗ್ಯಾರೆಂಟಿ"- ಪ್ರತಾಪ್ ಟಾಂಗ್

ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದ ಮಾಧ್ಯವೊಂದರ ಸಾಮಾಜಿಕ ಜಾಲತಾಣ ಪೇಜ್ ನಲ್ಲಿ ಜನರು ಪ್ರದೀಪ್ ಈಶ್ವರ್ ಅವರನ್ನು ಕಾಮೆಂಟ್ ವಿಭಾಗದಲ್ಲಿ ತರಾಟೆಗೆ ತೆಗೆದುಕೊಂಡಿದ್ದು, ಹಿಗ್ಗಾ-ಮುಗ್ಗಾ ಝಾಡಿಸಿದ್ದಾರೆ.

ಬೆಂಗಳೂರು: ಯಾವುದೇ ವರ್ಗಾವಣೆ ಆಗ ಬೇಕಾದರೆ ಸಿಎಂ ಪುತ್ರನಿಗೆ ತೆರಿಗೆ ಕಟ್ಟ ಬೇಕು ಎಂದು ಆರೋಪಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಟೀಕೆ ಮಾಡಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನ್ನು ಸಾಮಾಜಿಕ ಜಾಲತಾಣದಲ್ಲಿ ಜನರೇ ತರಾಟೆಗೆ ತೆಗೆದುಕೊಂಡಿದ್ದಾರೆ.

"ಮೈಸೂರಿನ ಮಾಜಿ ಸಂಸದ ಮಿಸ್ಟರ್ ಅವಿವೇಕಿ ಪ್ರತಾಪ್ ಸಿಂಹ ಅವರು ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತನಾಡಿದ್ದರು, ನೀವು ಸಿದ್ದರಾಮಯ್ಯ ಕಾಲಿನ ಧೂಳಿಗೂ ಸಮವಲ್ಲ, ಸಿಎಂ ಪುತ್ರ ಯತೀಂದ್ರ ಟ್ಯಾಕ್ಸ್ ಬಗ್ಗೆ ಮಾತನಾಡುವುದಕ್ಕೂ ಮೊದಲು ಆರ್ ಅಶೋಕ್ ಟ್ಯಾಕ್ಸ್, ವಿಜಯಪುರದಲ್ಲಿ ಯತ್ನಾಳ್ ಟ್ಯಾಕ್ಸ್ ಬಗ್ಗೆಯೂ ಪ್ರತಾಪ್ ಸಿಂಹ ಮಾತನಾಡಲಿ" ಎಂದು ಮಾಧ್ಯಮಗಳಿಗೆ ಪ್ರದೀಪ್ ಈಶ್ವರ್ ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದ ಮಾಧ್ಯವೊಂದರ ಸಾಮಾಜಿಕ ಜಾಲತಾಣ ಪೇಜ್ ನಲ್ಲಿ ಜನರು ಪ್ರದೀಪ್ ಈಶ್ವರ್ ಅವರನ್ನು ಕಾಮೆಂಟ್ ವಿಭಾಗದಲ್ಲಿ ತರಾಟೆಗೆ ತೆಗೆದುಕೊಂಡಿದ್ದು, ಹಿಗ್ಗಾ-ಮುಗ್ಗಾ ಝಾಡಿಸಿದ್ದಾರೆ.

ಮಾತಿನ ಮೇಲೆ ಹಿಡಿತವಿಲ್ಲದ ಈ ಶಾಸಕನ ಮಾತು ಕೇಳಿ ಪಾಠ ಕಲಿಯುವ ವಿದ್ಯಾರ್ಥಿಗಳಿಗೆ ಕತೆಯನ್ನು ದೇವರೇ ಕಾಪಾಡಬೇಕು ಎಂದು ವ್ಯಕ್ತಿಯೋರ್ವರು ಕಾಮೆಂಟ್ ಮಾಡಿದ್ದಾರೆ. ಸಾವಿರಾರು ಕಾಮೆಂಟ್ ಗಳು ಪ್ರದೀಪ್ ಈಶ್ವರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು ಮೊದಲು ರಸ್ತೆ ದುರಸ್ತಿ ಮಾಡಿಸಿ ಆ ನಂತರ ಟ್ಯಾಕ್ಸ್ ಬಗ್ಗೆ ಮಾತನಾಡಿ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಜನರ ಕಾಮೆಂಟ್ ಗಳನ್ನು ಗಮನಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ ಕಾಮೆಂಟ್ ಗಳ ಸ್ಕ್ರೀನ್ ಶಾಟ್ ನ್ನು ಹಂಚಿಕೊಂಡಿದ್ದು, ವರದಿಯ ಕೆಳಗಿರುವ ಕಾಮೆಂಟ್ ಗಳನ್ನು ನೋಡಿದರೆ ಇವನು ಮೆಂಟಲ್ ಆಗುವುದು ಗ್ಯಾರಂಟಿ! ಎಂದು ಪ್ರದೀಪ್ ಈಶ್ವರ್ ಗೆ ಟಾಂಗ್ ಕೊಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಒಂದೇ ಸೂರಿನಡಿ ರಾಮ್-ರಹೀಮ್: ದ್ವೇಷ ಹರಡುವವರ ಮಧ್ಯೆ ಮುಸ್ಲಿಮರಿಗಾಗಿ ‘ಇಫ್ತಾರ್ ಕೂಟ’ ಆಯೋಜಿಸುತ್ತಿರುವ ಹಿಂದೂ ಮಹಿಳೆ..!

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

SCROLL FOR NEXT