ಹಾಲಿನ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ ರೌಡಿ  
ರಾಜ್ಯ

Bengaluru: ಹಾಲಿನ ಅಂಗಡಿಗೆ ನುಗ್ಗಿ, ಮಾಲೀಕನಿಗೆ ಚಪ್ಪಲಿಯಿಂದ ಮನಬಂದಂತೆ ಹಲ್ಲೆ, ಬಿಹಾರ ಮೂಲದ ರೌಡಿ ಅಂದರ್! Video

ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಹಾಲಿನ ಪಾರ್ಲರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬೆಂಗಳೂರು: ವಾಹನ ನಿಲ್ಲಿಸುವ ವಿಚಾರದಲ್ಲಿ ತೀವ್ರ ಗಲಾಟೆ ನಡೆದು ಪತ್ನಿ ಎದುರೇ ಹಾಲಿನ ಅಂಗಡಿ ಮಾಲೀಕನಿಗೆ ಮನಬಂದಂತೆ ಹಲ್ಲೆ ನಡೆಸಿದ ಆರೋಪದ ಮೇಲೆ 36 ವರ್ಷದ ರೌಡಿಶೀಟರ್ ನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಹಾಲಿನ ಪಾರ್ಲರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹಾಲಿನ ಅಂಗಡಿ ಮಾಲೀಕನಿಗೆ ರೌಡಿಯೊಬ್ಬ ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಜನರನ್ನು ಹೆದರಿಸಲಿಲ್ಲ ಎಂದು ಆಕ್ರೋಶಗೊಂಡು ತನ್ನದೇ ಅಂಗರಕ್ಷಕರಿಗೆ ಬಡಿದಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಆರೋಪಿಯನ್ನು ಬಿಹಾರ ಮೂಲದ ತರುಣ್ ಚೌಧರಿ ಎಂದು ಗುರುತಿಸಲಾಗಿದ್ದು, ಆತ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾನೆ ಎನ್ನಲಾಗಿದೆ.

ಈತ ಅಕ್ಟೋಬರ್ 9 ರಂದು ರಾತ್ರಿ 10 ಗಂಟೆ ಸುಮಾರಿಗೆ ಅಂಗಡಿ ಮಾಲೀಕ ಗೋಪಾಲ್ ಹೆಚ್ ವಿ (42) ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ಅಂಗಡಿ ಮಾಲೀಕನ ಹೆಂಡತಿ ಮೇಲೂ ಹಲ್ಲೆ: ಕಪ್ಪು ಬಣ್ಣದ ರೇಂಜ್ ರೋವರ್‌ನಲ್ಲಿ ಇಬ್ಬರು ಅಂಗರಕ್ಷಕರೊಂದಿಗೆ ಅಂಗಡಿಗೆ ಬಂದ ಚೌಧರಿ, ಅಂಗಡಿ ಮಾಲೀಕ ಯಾರು ಎಂದು ವಿಚಾರಿಸಿದ್ದಾನೆ. ತದನಂತರ ಅಂಗರಕ್ಷಕರಿಂದ ದೊಣ್ಣೆ ಕೇಳಿ ಅಂಗಡಿಗೆ ನುಗ್ಗಿ ಗೋಪಾಲ್ ಮೇಲೆ ಹಲ್ಲೆ ನಡೆಸಿದ್ದಾನೆ. ಗೋಪಾಲ್ ಅವರ ಪತ್ನಿ ತಡೆಯಲು ಯತ್ನಿಸಿದಾಗ ಚೌಧರಿ ಅವರ ಮೇಲೂ ಹಲ್ಲೆ ನಡೆಸಿದ್ದಾನೆ.

ಹಾಲಿನ ವ್ಯಾನ್ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ತಮ್ಮ ಹಾಲಿನ ವ್ಯಾನ್ ಅನ್ನು ಅಂಗಡಿಯ ಮುಂದೆ ನಿಲ್ಲಿಸಿದರೆ ಗುಂಡು ಹಾರಿಸುವುದಾಗಿ ಮತ್ತು ಅವರ ಕಾರನ್ನು ಓಡಿಸುವುದಾಗಿ ಚೌಧರಿ ತನಗೆ ಮತ್ತು ಅವರ ಹೆಂಡತಿಗೆ ಬೆದರಿಕೆ ಹಾಕಿದ್ದಾರೆ ಎಂದು ಗೋಪಾಲ್ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ. ಅಲ್ಲದೇ ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಹೇಳಿದ್ದಾರೆ.

ಹಾಲಿನ ವಾಹನವನ್ನು ಆತನ ಅಂಗಡಿ ಮುಂಭಾಗ ನಿಲ್ಲಿಸಿದರೆ ಗುಂಡಿಟ್ಟು ಸಾಯಿಸುತ್ತೇನೆ. ಅಲ್ಲದೇ ಕಾರು ಹರಿಸಿ ಕೊಲೆ ಮಾಡುವುದಾಗಿ ಚೌಧರಿ ಬೆದರಿಕೆ ಹಾಕಿದ್ದಾನೆ. ಚಪ್ಪಲಿಯಿಂದ ಆತ ಹಲ್ಲೆ ನಡೆಸಿರುವುದಾಗಿ ಗೋಪಾಲ್ ಎಫ್ ಐಆರ್ ನಲ್ಲಿ ತಿಳಿಸಿದ್ದಾರೆ.

ವಿಡಿಯೋ ವೈರಲ್:

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಚೌಧರಿ ದಂಪತಿಗಳ ಮೇಲೆ ಹಲ್ಲೆ ಮಾಡಿದ್ದು ಮಾತ್ರವಲ್ಲದೆ ತನ್ನ ಅಂಗರಕ್ಷಕರನ್ನು ತಡೆಯಲು ಪ್ರಯತ್ನಿಸಿದಾಗ ಬಡಿದಿದ್ದಾನೆ.

ಬಂಧಿಸಿ ಜೈಲಿಗಟ್ಟಿದ್ದ ಪೊಲೀಸರು: ಪೊಲೀಸರು ಚೌಧರಿ ವಿರುದ್ಧ BNS ಸೆಕ್ಷನ್ 115 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 126 (ತಾಳ್ಮೆ ಕಳೆದುಕೊಂಡಿರುವುದು) 133 (ಅಗೌರವದ ಉದ್ದೇಶದಿಂದ ಆಕ್ರಮಣ) 351 (ಅಪರಾಧ ಬೆದರಿಕೆ), ಮತ್ತು 74 (ದಾಳಿ ಅಥವಾ ಕ್ರಿಮಿನಲ್ ಬಲದ ಬಳಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರೂರ್ ಕಾಲ್ತುಳಿತ ಪ್ರಕರಣ ಸಿಬಿಐಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

Israel-Gaza war: 7 ಒತ್ತೆಯಾಳುಗಳ ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್, ಯುದ್ಧ ಅಂತ್ಯ ಎಂದು ಟ್ರಂಪ್ ಘೋಷಣೆ

'ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಅಸಾಧ್ಯ: ಜಮೀರ್‌ನ ಬಿಳಿ ಟೋಪಿ ಸಾಬಣ್ಣ ಅಂತ ಕರಿತೀರಾ?'

ಸಮೀಕ್ಷೆಗೆ ಸಿಬ್ಬಂದಿ ನಿಯೋಜನೆ: ತುರ್ತು ಪರಿಸ್ಥಿತಿ ನಿಭಾಯಿಸುವುದೇ ಸವಾಲು: ಗ್ರೆಟರ್ ಬೆಂಗಳೂರು ಪ್ರಾಧಿಕಾರ

Tamil Nadu: ವಿಷಯುಕ್ತ 'ಕೋಲ್ಡ್ರಿಫ್' ಸಿರಫ್ : ಸ್ರೆಸನ್ ಫಾರ್ಮಾ ಕಂಪನಿಯ ಲೈಸನ್ಸ್ ರದ್ದುಗೊಳಿಸಿ, ಬಾಗಿಲು ಮುಚ್ಚಿಸಿದ ಸ್ಟಾಲಿನ್ ಸರ್ಕಾರ!

SCROLL FOR NEXT