ಲಾಲ್ ಬಾಗ್ ಗೆ ತೇಜಸ್ವಿ ಸೂರ್ಯ ಭೇಟಿ 
ರಾಜ್ಯ

6 ಎಕರೆಯಲ್ಲ, ಲಾಲ್‌ಬಾಗ್‌ನ 6 ಇಂಚು ಜಾಗ ಕಸಿಯಲು ಬಿಡಲ್ಲ; ಸುರಂಗ ಮಾರ್ಗಕ್ಕೆ ಭೂವೈಜ್ಞಾನಿಕ ವರದಿ ಅಗತ್ಯ: ತೇಜಸ್ವಿ ಸೂರ್ಯ

ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ರಚಿಸಲಾದ, ಬಿ-ಸ್ಮೈಲ್ ಅಧಿಕಾರಿಗಳು, ಪರಿಸರ ಪರಿಣಾಮ ಮೌಲ್ಯಮಾಪನ ಕೈಗೊಳ್ಳದ ಕಾರಣ ಮತ್ತು ಸುರಂಗ ರ‍್ಯಾಂಪ್‌ಗಾಗಿ, ಉದ್ಯಾನವನದ ಭಾಗವನ್ನು ಗುರುತಿಸುವ ಮೊದಲು ಸಾರ್ವಜನಿಕರು ಮತ್ತು ಲಾಲ್‌ಬಾಗ್‌ನ ನಿಯಮಿತ ವಾಕಿಂಗ್ ಮಾಡುವವರೊಂದಿಗೆ ಸಮಾಲೋಚನೆ ನಡೆಸಿಲ್ಲ.

ಬೆಂಗಳೂರು: ವಿನಾಶಕಾರಿ ಸುರಂಗ ಮಾರ್ಗಕ್ಕೆ ಲಾಲ್‌ಬಾಗ್‌ನಲ್ಲಿ ಆರು ಎಕರೆಯಲ್ಲ, ಆರು ಇಂಚು ಭೂಮಿಯನ್ನೂ ಕಸಿದುಕೊಳ್ಳಲು ಬಿಡುವುದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.

ಪ್ರಸ್ತಾವಿತ ಸುರಂಗ ಮಾರ್ಗದ ಲಾಲ್‌ಬಾಗ್ ಭೂ-ಸ್ವಾಧೀನಕ್ಕೆ ವಿರೋಧ ವ್ಯಕ್ತವಾಗಿದ್ದು, ಭೂವೈಜ್ಞಾನಿಕ ವರದಿ ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ. ತೇಜಸ್ವಿ ಸೂರ್ಯ ಭಾನುವಾರ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ಸುರಂಗ ಮಾರ್ಗದ ಜಾಗವನ್ನು ಪರಿಶೀಲಿಸಿದರು.

ಪರಿಶೀಲನೆಯ ವೇಳೆ, ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆಗೆ ಈ ಯೋಜನೆಯಿಂದ 300 ದಶಲಕ್ಷ ವರ್ಷಗಳಷ್ಟು ಹಳೆಯದಾದ ರಾಷ್ಟ್ರೀಯ ಭೂವೈಜ್ಞಾನಿಕ ಸ್ಮಾರಕವಾದ ಲಾಲ್‌ಬಾಗ್ ಬಂಡೆಗಳ ರಚನೆಯ ಮೇಲೆ ಉಂಟಾಗುವ ಭೂವೈಜ್ಞಾನಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ನಿರ್ದೇಶನ ನೀಡಿದರು.

ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ರಚಿಸಲಾದ, ಬಿ-ಸ್ಮೈಲ್ ಅಧಿಕಾರಿಗಳು, ಪರಿಸರ ಪರಿಣಾಮ ಮೌಲ್ಯಮಾಪನ ಕೈಗೊಳ್ಳದ ಕಾರಣ ಮತ್ತು ಸುರಂಗ ರ‍್ಯಾಂಪ್‌ಗಾಗಿ, ಉದ್ಯಾನವನದ ಭಾಗವನ್ನು ಗುರುತಿಸುವ ಮೊದಲು ಸಾರ್ವಜನಿಕರು ಮತ್ತು ಲಾಲ್‌ಬಾಗ್‌ನ ನಿಯಮಿತ ವಾಕಿಂಗ್ ಮಾಡುವವರೊಂದಿಗೆ ಸಮಾಲೋಚನೆ ನಡೆಸದೇ ಇರುವುದರ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿದರು.

ಈ ವೇಳೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಸುರಂಗ ಮಾರ್ಗದ ನಿರ್ಗಮನ ರ‍್ಯಾಂಪ್ ಮಾಡಲು ಬೆಂಗಳೂರಿನ ಅತ್ಯಂತ ಅಮೂಲ್ಯ ಸ್ಥಳವಾದ ಲಾಲ್‌ಬಾಗ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ. ಈ ಯೋಜನೆಯು ನಮ್ಮ ನಗರದ ಪರಂಪರೆಯ ಭಾಗವಾಗಿರುವ, 300 ದಶಲಕ್ಷ ವರ್ಷಗಳಷ್ಟು ಹಳೆಯದಾದ ಪುರಾತತ್ವ ಅದ್ಭುತವಾದ ಲಾಲ್‌ಬಾಗ್ ಬಂಡೆಗಳಿಗೆ ದೊಡ್ಡ ಅಪಾಯವನ್ನು ತಂದೊಡ್ಡುತ್ತದೆ.

ರ‍್ಯಾಂಪ್‌ನಲ್ಲಿ ಮಾಲ್‌ಗಳು ಮತ್ತು ತಿನಿಸುಗಳನ್ನು ಒಳಗೊಂಡ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲೂ ಸಹ ಸರ್ಕಾರ ಬಯಸಿದ್ದು, ಲಾಲ್‌ಬಾಗ್ ನಮ್ಮೆಲ್ಲರಿಗೂ ಸೇರಿದ್ದು, ಅದು ನಗರಕ್ಕೆ ಸೇರಿದ್ದು. ಬೆಂಗಳೂರಿನ ಜನರು ನಗರಕ್ಕೆ ವಿನಾಶವನ್ನು ತರುವ ಈ ವಿವೇಚನಾರಹಿತ ಯೋಜನೆಯ ಭಾಗವಾಗಿ ಲಾಲ್‌ಬಾಗ್‌ನ ಯಾವುದೇ ಭಾಗವನ್ನು ಬಿಟ್ಟುಕೊಡಲು ಬಯಸುವುದಿಲ್ಲ ಎಂದರು.

ಯಾವುದೇ ಪರಿಸರ ಪರಿಣಾಮ ಮೌಲ್ಯಮಾಪನ ಅಥವಾ ಸುರಂಗವು ಲಾಲ್‌ಬಾಗ್‌ನ ಪ್ರಾಚೀನ ಬಂಡೆಯ ರಚನೆಯ ಯಾವುದೇ ಭಾಗಕ್ಕೆ ಪರಿಣಾಮ ಬೀರುತ್ತದೆಯೇ ಎಂಬುದರ ಕುರಿತು ಯಾವುದೇ ಭೂವೈಜ್ಞಾನಿಕ ಮೌಲ್ಯಮಾಪನವಿಲ್ಲದೆ ಸುರಂಗ ಮಾರ್ಗ ಯೋಜನೆಯನ್ನು ಆತುರದಿಂದ ಮಾಡಲಾಗುತ್ತಿರವುದು ಅಕ್ಷಮ್ಯ. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಸಾಮೂಹಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆಗಳಿಗೆ ಆದ್ಯತೆ ನೀಡುವ ಬದಲು, ಕರ್ನಾಟಕ ಸರ್ಕಾರ ಈ ಅನಗತ್ಯ ಸುರಂಗ ಮಾರ್ಗ ಯೋಜನೆಯನ್ನು ಜನರ ಮೇಲೆ ಹೇರುತ್ತಿದೆ ಎಂದರು.

ಜಿಎಸ್‌ಐಗೆ ನೀಡಿದ ತಮ್ಮ ಮನವಿಯಲ್ಲಿ, ಕರ್ನಾಟಕ ಸರ್ಕಾರದ ಸುರಂಗ ಮಾರ್ಗ ಯೋಜನೆಯನ್ನು ಲಾಲ್‌ಬಾಗ್ ಬಂಡೆಗಳ ರಚನೆಯ ಮೇಲೆ ಉಂಟಾಗಬಹುದಾದ ಸಂಭಾವ್ಯ ಪರಿಣಾಮದ ವೈಜ್ಞಾನಿಕ ಮೌಲ್ಯಮಾಪನವಿಲ್ಲದೆ ಮುಂದಕ್ಕೆ ತಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಇಂತಹ ಯೋಜನೆಗಳಿಗೆ, ಪರಿಸರ ಪರಿಣಾಮ ಮೌಲ್ಯಮಾಪನ (EIA) ಮಾಡುವುದು ಭಾರತ ಸರ್ಕಾರದಿಂದ ಕಡ್ಡಾಯ.

ಆದರೆ, ಬಿ-ಸ್ಮೈಲ್ ಈ ಯೋಜನೆಗೆ ಇಐಎಯಿಂದ ವಿನಾಯಿತಿ ಇದೆ ಎಂದು ಹೇಳಿಕೊಳ್ಳುತ್ತಿರುವುದು ಸತ್ಯಕ್ಕೆ ದೂರ. ಉತ್ತರಾಖಂಡದಲ್ಲಿ ಇತ್ತೀಚೆಗೆ ನಡೆದ ಸುರಂಗ ದುರಂತದ ನಂತರ, ಯಾವುದೇ ಸುರಂಗವನ್ನು ಕೊರೆಯುವ ಮೊದಲು ಭೂಕಂಪನ ಮತ್ತು ಭೂವೈಜ್ಞಾನಿಕ ಪರಿಣಾಮದ ಸಂಪೂರ್ಣ ಅಧ್ಯಯನವನ್ನು ಕೈಗೊಳ್ಳಬೇಕು ಎಂಬುದು ಕೇಂದ್ರ ಸರ್ಕಾರದ ನಿರ್ಣಯವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

SCROLL FOR NEXT