ವಿಜಯಪುರ: ಸಹೋದರರಿಬ್ಬರ ಭೀಕರ ಕೊಲೆ! 
ರಾಜ್ಯ

ವಿಜಯಪುರ: ಹಳೆ ವೈಷಮ್ಯದ ಶಂಕೆ; ಇಬ್ಬರು ಯುವಕರನ್ನು ಕೊಲೆ ಮಾಡಿದ ದುಷ್ಕರ್ಮಿಗಳು

ಪೊಲೀಸ್ ಮೂಲಗಳ ಪ್ರಕಾರ, ಭಾನುವಾರ ಅಪರಾಧ ಎಸಗಿದ ತಕ್ಷಣ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ವಿಜಯಪುರ: ವಿಜಯಪುರ ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಇಬ್ಬರು ಯುವಕರನ್ನು ಕ್ರೂರವಾಗಿ ಕೊಲೆ ಮಾಡಲಾಗಿದ್ದು, ಹಳೆ ವೈಷಮ್ಯದ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತರನ್ನು ಸಾಗರ್ ಬೆಲುಂಡಗಿ (25) ಮತ್ತು ಇಸಾಹಕ್ ಖುರೇಶಿ (24) ಎಂದು ಗುರುತಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಭಾನುವಾರ ಅಪರಾಧ ಎಸಗಿದ ತಕ್ಷಣ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಸಾಗರ್ ಮತ್ತು ಇಸಾಹಕ್ ಇಬ್ಬರೂ ಎರಡು ವರ್ಷಗಳ ಹಿಂದೆ ತಮ್ಮೂರ್ ಗ್ರಾಮದ ಈರನಗೌಡ ಎಂಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದರು. ಈ ವೈಷಮ್ಯಕ್ಕೆ ಇಬ್ಬರ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಹಲ್ಲೆ ಬಳಿಕ ಹಲವು ದಿನಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದ ಈರನಗೌಡ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದರು. ಈರನಗೌಡ ಅವರ ಸಾವಿಗೆ ಸೇಡು ತೀರಿಸಿಕೊಳ್ಳಳು ಇಬ್ಬರನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ವಿಜಯಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭ

ಬೆಂಗಳೂರು: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ BWSSB ಸಂಪ್ ನಲ್ಲಿ ಪತ್ತೆ!

9 ವರ್ಷಗಳ ಪ್ರೀತಿ ಮದುವೆಯಾದ ಎರಡೇ ತಿಂಗಳಿಗೆ ಅಂತ್ಯ: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!

SCROLL FOR NEXT