ವಿಎಸ್ ಉಗ್ರಪ್ಪ 
ರಾಜ್ಯ

CM ಗೆ ಮುಜುಗರ ಆಗುವ ರೀತಿ ಮಾತನಾಡಬಾರದಿತ್ತು: ವಿಎಸ್ ಉಗ್ರಪ್ಪ ಹೇಳಿಕೆಗೆ ಚುನಾವಣಾ ಆಯುಕ್ತ ಸಂಗ್ರೇಶಿ ಬೇಸರ

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕಾಗಿ ಬಡಿದಾಡುತ್ತಿದ್ದಾರೆ‌. ಅವರು ಇನ್ನೊಬ್ಬರ ಅನ್ನ ಕಸಿದುಕೊಳ್ಳುವುದಿಲ್ಲ. ಅವರು ಒಂದು ಜನಾಂಗಕ್ಕೆ ಸೀಮಿತರಲ್ಲ. ಪಕ್ಷ ಅಥವಾ ಬೇರೆ ವೇದಿಕೆಗಳಲ್ಲಿ ಮೀಸಲಾತಿ ಬಗ್ಗೆ ಪ್ರಶ್ನಿಸಬಹುದಿತ್ತು.

ಕೊಪ್ಪಳ: ಸಾಮಾಜಿಕ ನ್ಯಾಯದ ತಳಹದಿಯಿಂದ ಬಂದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಾರರು. ಆದರೂ ಸರ್ಕಾರಿ ಕಾರ್ಯಕ್ರಮದಲ್ಲಿ ನಮ್ಮ ತಟ್ಟೆಯಲ್ಲಿನ ಅನ್ನ ಕಸಿದುಕೊಳ್ಳಬೇಡಿ ಎಂದಿದ್ದು ಸರಿಯಲ್ಲ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೇಸರ ವ್ಯಕ್ತಪಡಿಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಸಾಮಾಜಿಕ ನ್ಯಾಯಕ್ಕಾಗಿ ಜೀವನ ಮುಡಿಪಾಗಿಟ್ಟ ಸಿದ್ದರಾಮಯ್ಯ ಅವರಿಗೆ ಮುಜುಗರ ಆಗುವ ರೀತಿಯಲ್ಲಿ ಉಗ್ರಪ್ಪ ಮಾತನಾಡಬಾರದಿತ್ತು. ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕಾಗಿ ಬಡಿದಾಡುತ್ತಿದ್ದಾರೆ‌.

ಅವರು ಇನ್ನೊಬ್ಬರ ಅನ್ನ ಕಸಿದುಕೊಳ್ಳುವುದಿಲ್ಲ. ಅವರು ಒಂದು ಜನಾಂಗಕ್ಕೆ ಸೀಮಿತರಲ್ಲ. ಪಕ್ಷ ಅಥವಾ ಬೇರೆ ವೇದಿಕೆಗಳಲ್ಲಿ ಮೀಸಲಾತಿ ಬಗ್ಗೆ ಪ್ರಶ್ನಿಸಬಹುದಿತ್ತು. ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೇ. ಪ್ರಜ್ಞಾವಂತರು ಇದನ್ನು ಒಪ್ಪುವುದಿಲ್ಲ. ನನಗೆ ಗೊತ್ತಿರುವ ಮಾಹಿತಿ ಹೇಳಬೇಕು.‌ ಇಲ್ಲದಿದ್ದರೆ ನನ್ನದೂ ತಪ್ಪಾಗುತ್ತದೆ ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಮೀಕ್ಷೆಯಿಂದ ಎಲ್ಲ ಸಮುದಾಯಗಳ ಜನರ ಮಾಹಿತಿ ಗೊತ್ತಾಗುತ್ತದೆ. ಅವರಿಗೆ ಕಲ್ಯಾಣ ಯೋಜನೆ ರೂಪಿಸಲು ಸಮೀಕ್ಷೆಯಿಂದ ಲಭಿಸುವ ದತ್ತಾಂಶಗಳು ಅನುಕೂಲವಾಗುತ್ತವೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕಿದ್ದು, ನವೆಂಬರ್‌ನಿಂದ ಕೆಲಸ ಆರಂಭಿಸುತ್ತೇವೆ. ಕೇಂದ್ರ ಚುನಾವಣಾ ಆಯೋಗ ನಾವು ಮಾಡಿದ ಬಳಿಕ ಪಟ್ಟಿ ಪರಿಷ್ಕರಿಸಲಿ ಎಂದು ಪತ್ರ ಬರೆದಿದ್ದೇನೆ. ಅವರೂ ಸ್ಥಳೀಯ ಸಂಸ್ಥೆ ಚುನಾವಣೆ ಇರುವೆಡೆ ಪರಿಷ್ಕರಣೆ ಮಾಡುವುದಿಲ್ಲವೆಂದು ತಿಳಿಸಿದ್ದಾರೆ‌ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!