ವಿಎಸ್ ಉಗ್ರಪ್ಪ 
ರಾಜ್ಯ

CM ಗೆ ಮುಜುಗರ ಆಗುವ ರೀತಿ ಮಾತನಾಡಬಾರದಿತ್ತು: ವಿಎಸ್ ಉಗ್ರಪ್ಪ ಹೇಳಿಕೆಗೆ ಚುನಾವಣಾ ಆಯುಕ್ತ ಸಂಗ್ರೇಶಿ ಬೇಸರ

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕಾಗಿ ಬಡಿದಾಡುತ್ತಿದ್ದಾರೆ‌. ಅವರು ಇನ್ನೊಬ್ಬರ ಅನ್ನ ಕಸಿದುಕೊಳ್ಳುವುದಿಲ್ಲ. ಅವರು ಒಂದು ಜನಾಂಗಕ್ಕೆ ಸೀಮಿತರಲ್ಲ. ಪಕ್ಷ ಅಥವಾ ಬೇರೆ ವೇದಿಕೆಗಳಲ್ಲಿ ಮೀಸಲಾತಿ ಬಗ್ಗೆ ಪ್ರಶ್ನಿಸಬಹುದಿತ್ತು.

ಕೊಪ್ಪಳ: ಸಾಮಾಜಿಕ ನ್ಯಾಯದ ತಳಹದಿಯಿಂದ ಬಂದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಾರರು. ಆದರೂ ಸರ್ಕಾರಿ ಕಾರ್ಯಕ್ರಮದಲ್ಲಿ ನಮ್ಮ ತಟ್ಟೆಯಲ್ಲಿನ ಅನ್ನ ಕಸಿದುಕೊಳ್ಳಬೇಡಿ ಎಂದಿದ್ದು ಸರಿಯಲ್ಲ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೇಸರ ವ್ಯಕ್ತಪಡಿಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಸಾಮಾಜಿಕ ನ್ಯಾಯಕ್ಕಾಗಿ ಜೀವನ ಮುಡಿಪಾಗಿಟ್ಟ ಸಿದ್ದರಾಮಯ್ಯ ಅವರಿಗೆ ಮುಜುಗರ ಆಗುವ ರೀತಿಯಲ್ಲಿ ಉಗ್ರಪ್ಪ ಮಾತನಾಡಬಾರದಿತ್ತು. ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕಾಗಿ ಬಡಿದಾಡುತ್ತಿದ್ದಾರೆ‌.

ಅವರು ಇನ್ನೊಬ್ಬರ ಅನ್ನ ಕಸಿದುಕೊಳ್ಳುವುದಿಲ್ಲ. ಅವರು ಒಂದು ಜನಾಂಗಕ್ಕೆ ಸೀಮಿತರಲ್ಲ. ಪಕ್ಷ ಅಥವಾ ಬೇರೆ ವೇದಿಕೆಗಳಲ್ಲಿ ಮೀಸಲಾತಿ ಬಗ್ಗೆ ಪ್ರಶ್ನಿಸಬಹುದಿತ್ತು. ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೇ. ಪ್ರಜ್ಞಾವಂತರು ಇದನ್ನು ಒಪ್ಪುವುದಿಲ್ಲ. ನನಗೆ ಗೊತ್ತಿರುವ ಮಾಹಿತಿ ಹೇಳಬೇಕು.‌ ಇಲ್ಲದಿದ್ದರೆ ನನ್ನದೂ ತಪ್ಪಾಗುತ್ತದೆ ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಮೀಕ್ಷೆಯಿಂದ ಎಲ್ಲ ಸಮುದಾಯಗಳ ಜನರ ಮಾಹಿತಿ ಗೊತ್ತಾಗುತ್ತದೆ. ಅವರಿಗೆ ಕಲ್ಯಾಣ ಯೋಜನೆ ರೂಪಿಸಲು ಸಮೀಕ್ಷೆಯಿಂದ ಲಭಿಸುವ ದತ್ತಾಂಶಗಳು ಅನುಕೂಲವಾಗುತ್ತವೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕಿದ್ದು, ನವೆಂಬರ್‌ನಿಂದ ಕೆಲಸ ಆರಂಭಿಸುತ್ತೇವೆ. ಕೇಂದ್ರ ಚುನಾವಣಾ ಆಯೋಗ ನಾವು ಮಾಡಿದ ಬಳಿಕ ಪಟ್ಟಿ ಪರಿಷ್ಕರಿಸಲಿ ಎಂದು ಪತ್ರ ಬರೆದಿದ್ದೇನೆ. ಅವರೂ ಸ್ಥಳೀಯ ಸಂಸ್ಥೆ ಚುನಾವಣೆ ಇರುವೆಡೆ ಪರಿಷ್ಕರಣೆ ಮಾಡುವುದಿಲ್ಲವೆಂದು ತಿಳಿಸಿದ್ದಾರೆ‌ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT