ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಸೋಮವಾರ ಹಾಸನದ ಹಾಸನಾಂಬ ದೇವಸ್ಥಾನದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರೊಂದಿಗೆ ಸಂವಾದ ನಡೆಸಿದರು. 
ರಾಜ್ಯ

ಹಾಸನಾಂಬ ಉತ್ಸವ: ಸೋಮವಾರ ಒಂದೇ ದಿನ 1.5 ಲಕ್ಷ ಭಕ್ತರಿಂದ ದೇವಿಯ ದರ್ಶನ

ಬೆಳಿಗ್ಗೆ 11 ಗಂಟೆಗೆ ಸರದಿಯಲ್ಲಿ ನಿಂತ ಜಿಲ್ಲಾಧಿಕಾರಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ದರ್ಶನ ಪಡೆದು, ದೇವಾಲಯದಿಂದ ಹೊರಬಂದರು.

ಹಾಸನ: ಹಾಸನಾಂಬ ದೇವಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದ್ದು, ಸೋಮವಾರ ಒಂದೇ ದಿನ 1.5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.

ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಕೂಡ ಸರದಿಯಲ್ಲಿ ನಿಂತು ಸಾರ್ವಜನಿಕರೊಂದಿಗೆ ಸುಮಾರು ಮೂರು ಗಂಟೆಗಳ ಕಾಲ ಕಾಯ್ದು ದರ್ಶನ ಪಡೆದರು.

ಬೆಳಿಗ್ಗೆ 11 ಗಂಟೆಗೆ ಸರದಿಯಲ್ಲಿ ನಿಂತ ಜಿಲ್ಲಾಧಿಕಾರಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ದರ್ಶನ ಪಡೆದು, ದೇವಾಲಯದಿಂದ ಹೊರಬಂದರು.

ಬಳಿಕ ಭಕ್ತರೊಂದಿಗೆ ಸಂವಾದ ನಡೆಸಿ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ದೇವಾಲಯದಲ್ಲಿ ಒದಗಿಸಲಾದ ಸೌಲಭ್ಯಗಳ ಬಗ್ಗೆ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ತ್ವರಿತ ದರ್ಶನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ದೇವಿಯ ಮುಂದೆ ಎಲ್ಲಾ ಜನರು ಸಮಾನರು. ದರ್ಶನಕ್ಕಾಗಿ ಸಾಮಾನ್ಯ ಸರತಿಯನ್ನು ಬಳಸುವುದು ಉತ್ತಮ ಎಂದು ಹೇಳಿದರು.

ಏತನ್ಮಧ್ಯೆ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ನೆರೆಯ ಜಿಲ್ಲೆಗಳು ಮತ್ತು ರಾಜ್ಯದ ವಿವಿಧ ಭಾಗಗಳಿಂದ ಬರುವ ಭಕ್ತರು ಅಕ್ಟೋಬರ್ 18 ರ ಮೊದಲು ದೇವಾಲಯಕ್ಕೆ ಭೇಟಿ ನೀಡಿ ಆರಾಮದಾಯಕ ದರ್ಶನ ಪಡೆಯಬೇಕೆಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT