ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕೆರೆಯಲ್ಲಿ ಮುಳುಗಿ ಬಾಲಕ ದಾರುಣ ಸಾವು

ಬಾಲಕ ಪೃಥ್ವಿಕ್ ತನ್ನ ಐವರು ಸ್ನೇಹಿತರೊಂದಿಗೆ ಕಿತ್ತನಹಳ್ಳಿ ಕೆರೆಗೆ ಸಂಜೆ 7 ಗಂಟೆ ಸುಮಾರಿಗೆ ಹೋಗಿದ್ದಾನೆ. ಸ್ನೇಹಿತರು ಕೆರೆ ಇಳಿದಿದ್ದರೂ, ಈಜು ಬಾರದ ಕಾರಣ ಪೃಥ್ವಿಕ್ ನೀರಿಗೆ ಇಳಿದಿರಲಿಲ್ಲ. ನಂತರ ಸ್ನೇಹಿತರು ನೀರಿಗೆ ಇಳಿಯುವಂತೆ ಮನವೊಲಿಸಿದ್ದಾರೆ.

ಬೆಂಗಳೂರು: ಆಟವಾಡಲು ಸ್ನೇಹತರೊಂದಿಗೆ ಕೆರೆಗೆ ಇಳಿದಿದ್ದ ಬಾಲಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿರುವ ಕಿತ್ತನಹಳ್ಳಿ ಕೆರೆಯಲ್ಲಿ ಭಾನುವಾರ ನಡೆದಿದೆ.

ಮೃತನನ್ನು ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಮತ್ತು ರಾಜಾಜಿನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ಕಾಲೇಜಿನ (ಪಿಯು) ವಿದ್ಯಾರ್ಥಿ ಪೃಥ್ವಿಕ್ (17) ಎಂದು ಗುರ್ತಿಸಲಾಗಿದೆ.

ಬಾಲಕ ಪೃಥ್ವಿಕ್ ತನ್ನ ಐವರು ಸ್ನೇಹಿತರೊಂದಿಗೆ ಕಿತ್ತನಹಳ್ಳಿ ಕೆರೆಗೆ ಸಂಜೆ 7 ಗಂಟೆ ಸುಮಾರಿಗೆ ಹೋಗಿದ್ದಾನೆ. ಸ್ನೇಹಿತರು ಕೆರೆ ಇಳಿದಿದ್ದರೂ, ಈಜು ಬಾರದ ಕಾರಣ ಪೃಥ್ವಿಕ್ ನೀರಿಗೆ ಇಳಿದಿರಲಿಲ್ಲ. ನಂತರ ಸ್ನೇಹಿತರು ನೀರಿಗೆ ಇಳಿಯುವಂತೆ ಮನವೊಲಿಸಿದ್ದಾರೆ. ಈ ವೇಳೆ ಪೃಥ್ವಿಕ್ ನೀರಿಗೆ ಇಳಿದಿದ್ದು, ಕೂಡಲೇ ಮುಳುಗಿದ್ದಾನೆ. ಇದನ್ನು ನೋಡಿದ ಆತನ ಸ್ನೇಹಿತರು ಭಯಭೀತರಾಗಿ ಸ್ಥಳದಿಂದ ಓಡಿಹೋಗಿ, ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ರಾತ್ರಿ 8 ಗಂಟೆ ಸುಮಾರಿಗೆ ಮಾಹಿತಿ ತಿಳಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಬಂದು ಶವವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಸಾವಿನ ಕುರಿತು ಪೃಥ್ವಿಕ್ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೃಥ್ವಿಕ್ ಸ್ನೇಹಿತರನ್ನು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಏರ್ ಇಂಡಿಯಾ ಟರ್ಬುಲೆನ್ಸ್: ಪೈಲಟ್ ಗಾಂಜಾ ಸೇವಿಸಿದ್ದು ದೃಢ- ವರದಿಗಳು

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 6 ಕಾರ್ಮಿಕರು ಸೇರಿ 9 ಮಂದಿ ದುರ್ಮರಣ

ಪಾಕ್‌ನಲ್ಲಿ ವಿಧ್ವಂಸ: ಕರಾಚಿಯಲ್ಲಿ ಪ್ರಧಾನ ಸೇನಾ ಕಚೇರಿ ಮೇಲೆ ಭೀಕರ ಗುಂಡಿನ ದಾಳಿ, ಓರ್ವ ಸೈನಿಕ ಸಾವು!

ಜಾರ್ಖಂಡ್‌ಗೆ ಏಕೆ ಹೋಗಲಿಲ್ಲ? ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದನ ಮಾತಿಗೆ ತಬ್ಬಿಬ್ಬಾದ ಪ್ರಿಯಾಂಕಾ ವಾದ್ರಾ, Video

ವಿಧಾನಸಭೆಗೆ ಆಗಸ್ಟ್ 14 ರಂದು ಹೊಸ ಸ್ಪೀಕರ್ ಆಯ್ಕೆ