ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ ಜೋಡಿ ಕೊಲೆ ಪ್ರಕರಣ; ಐವರ ಬಂಧನ, ತಪ್ಪಿಸಿಕೊಳ್ಳಲು ಯತ್ನಿಸಿದ ಮಾಸ್ಟರ್ ಮೈಂಡ್‌ಗೆ ಗುಂಡೇಟು

ಜುಲ್ಜುಲೆ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿದ್ದು, ಸದ್ಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ವಿಜಯಪುರ: ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಐದು ಜನರನ್ನು ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಆರೋಪಿ ಅಕ್ಷಯ್ ಜುಲ್ಜುಲೆ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, 'ಪೊಲೀಸರು ಆರೋಪಿಗಳನ್ನು ಬಂಧಿಸಲು ಹೋದಾಗ, ಜುಲ್ಜುಲೆ ಬೈಕ್‌ನಲ್ಲಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಆರೋಪಿ ಪರಾರಿಯಾಗಲು ಯತ್ನಿಸಿದಾಗ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದರು.

ಜುಲ್ಜುಲೆ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿದ್ದು, ಸದ್ಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಾರ್ಯಾಚರಣೆಯ ಸಮಯದಲ್ಲಿ ಇಬ್ಬರು ಪೊಲೀಸರೂ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಜಯಪುರ ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಭಾನುವಾರ ಜೋಡಿ ಕೊಲೆ ಮಾಡಲಾಗಿತ್ತು. ಸಂತ್ರಸ್ತರನ್ನು ಸಾಗರ್ ಬೆಲುಂಡಗಿ (25) ಮತ್ತು ಇಸಾಹಕ್ ಖುರೇಶಿ (24) ಎಂದು ಗುರುತಿಸಲಾಗಿದೆ. ಆರೋಪಿಗಳು ಅವರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಎಸ್‌ಸಿ ನಿಂಬರಗಿ ಮಾತನಾಡಿ, 'ಹಳೆಯ ದ್ವೇಷದಿಂದಲೇ ಆರೋಪಿಗಳು ಸಾಗರ್ ಮತ್ತು ಇಸಾಹಕ್ ಅವರನ್ನು ಕೊಲೆ ಮಾಡಿದ್ದಾರೆ. ಬಂಧಿತರನ್ನು ಮುತ್ತಣ್ಣ ಗೌಡ, ಸಂತೋಷ್, ಸಂಜಯ್, ಭರತ್ ಮತ್ತು ಅಕ್ಷಯ್ ಎಂದು ಗುರುತಿಸಲಾಗಿದೆ.

ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!