ಪ್ರಾತಿನಿಧಿಕ ಚಿತ್ರ 
ರಾಜ್ಯ

ಸದ್ಯಕ್ಕಿಲ್ಲ ಬ್ರೇಕ್..: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಅಕ್ಟೋಬರ್ 18ರವರೆಗೆ ಭಾರಿ ಮಳೆ; ಹವಾಮಾನ ಇಲಾಖೆ!

ಕರ್ನಾಟಕವನ್ನೂ ಒಳಗೊಂಡಂತೆ ದಕ್ಷಿಣ ಭಾರತದಲ್ಲಿ ಅಕ್ಟೋಬರ್ 18ರವರೆಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ಎಚ್ಚರಿಕೆ ನೀಡಿದೆ.

ಬೆಂಗಳೂರು: ಮಾನ್ಸೂನ್ ಮಾರುತಗಳ ನಿರ್ಗಮನ ಪ್ರಕ್ರಿಯೆ ಚಾಲ್ತಿಯಲ್ಲಿರುವಂತೆಯೇ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕವನ್ನೂ ಒಳಗೊಂಡಂತೆ ದಕ್ಷಿಣ ಭಾರತದಲ್ಲಿ ಅಕ್ಟೋಬರ್ 18ರವರೆಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ಎಚ್ಚರಿಕೆ ನೀಡಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಕೆಲ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಅಂತೆಯೇ ಈ ಅವಧಿಯಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಈ ಅವಧಿಯಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ. ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಗಳೂ ಇವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ನೈರುತ್ಯ ಮುಂಗಾರು ಅಂತ್ಯ

ನೈರುತ್ಯ ಮುಂಗಾರು ಕೊನೆಗೊಳ್ಳುವ ಮನ್ಸೂಚನೆಯೂ ಇದ್ದು, ಹೀಗಾಗಿ ಕೇಂದ್ರ ಮತ್ತು ಪೂರ್ವ ಭಾರತದ ಹಲವೆಡೆ ಮಳೆಯಾಗಲಿದೆ ಎಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ, ಸಂವಿಧಾನದ ಸ್ಪಷ್ಟ ಉಲ್ಲಂಘನೆ, ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಲು ಪರಿಶೀಲನೆ- ಸಿಎಂ ಸಿದ್ದರಾಮಯ್ಯ

ಮಣಿಪುರ: ಶಾಂತಿಗೆ ಮತ್ತೆ ಭಂಗ, ಮೈತೇಯ್ ವ್ಯಕ್ತಿಯ ಅಪಹರಣ, ಗುಂಡಿಕ್ಕಿ ಹತ್ಯೆ!

ಒಂದೇ ಸಾಲು, ಎರಡೇ ಮಾತು: ಭಾಷಣ ಅರ್ಧಕ್ಕೇ ಮೊಟಕುಗೊಳಿಸಿ ಸದನ ಬಿಟ್ಟು ನಿರ್ಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್-Video

ಧಾರ್‌- ಭೋಜ್‌ಶಾಲಾ ವಿವಾದ: ವಸಂತ ಪಂಚಮಿಯಂದು ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ 'ಸುಪ್ರೀಂ' ಅವಕಾಶ

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್ ದಿಢೀರ್ ಯೂ-ಟರ್ನ್: ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ಸುಂಕ ವಿಧಿಸದಿರಲು ನಿರ್ಧಾರ..!

SCROLL FOR NEXT