ಗ್ರಂಥಾಲಯ ಮೇಲ್ವಿಚಾರಕಿ ಭಾಗ್ಯಶ್ರಿ 
ರಾಜ್ಯ

ಕಲಬುರಗಿ: 3 ತಿಂಗಳಿಂದ ಸಿಗದ ವೇತನ; ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ

ಡೆತ್ ನೋಟ್​​ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂದು ತಿಳಿಸಿದ್ದಾರೆ

ಕಲಬುರಗಿ: 3 ತಿಂಗಳಿಂದ ಸಂಬಳ ಸಿಗದಿದ್ದಕ್ಕೆ ಬೇಸರಗೊಂಡ ಗ್ರಂಥಾಲಯ ಮೇಲ್ವಿಚಾರಕಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಭಾಗ್ಯಶ್ರಿ (45) ಎಂದು ಗುರುತಿಸಲಾಗಿದ್ದು, ಅವರು ಮಳಖೇಡ ಸರ್ಕಾರಿ ಗ್ರಂಥಾಲಯದಲ್ಲಿ ಮೇಲ್ವಿಚಾರಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಪಾಂಡುಸಿಂಗ್ ಚವ್ಹಾಣ್ ಅವರ ಹೇಳಿಕೆಯ ಪ್ರಕಾರ, ‘ಮೂರು ತಿಂಗಳಿಂದ ವೇತನ ಪಾವತಿ ಆಗಿರಲಿಲ್ಲ.

ಅಧಿಕಾರಿಗಳು ಸತಾಯಿಸುತ್ತಿದ್ದರು. ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪತ್ರ ಬರೆದಿಟ್ಟಿದ್ದಾರೆ. ಡೆತ್ ನೋಟ್​​ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು “ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಸ್ಥಳಕ್ಕೆ ಬರುವವರೆಗೂ ಮೃತದೇಹವನ್ನು ಹೊರತೆಗೆಯುವುದಿಲ್ಲ” ಎಂದು ಪಟ್ಟು ಹಿಡಿದು ಗ್ರಂಥಾಲಯದ ಎದುರು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ರಷ್ಯಾ ಬಿಟ್ಟು ವೆನೆಜುವೆಲಾದಿಂದ ಭಾರತ ತೈಲ ಖರೀದಿಸಲಿದೆ" - ಟ್ರಂಪ್ ಹೇಳಿಕೆ ಬಗ್ಗೆ ರಷ್ಯಾ ಹೇಳಿದ್ದೇನು?

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಆಂಥ್ರೊಪಿಕ್‌ನ ಹೊಸ AI ಟೂಲ್ ನಿಂದ ಭಾರತೀಯ ಐಟಿ ಷೇರುಗಳ ಕುಸಿತ

'ಜವಾಬ್ದಾರಿಯಿಂದ ಪ್ರಧಾನಿ ಮೋದಿ ನುಣುಚಿಕೊಂಡರು': ಸಂಸತ್ ಹೊರಗೆ ನರವಾಣೆ ಆತ್ಮಚರಿತ್ರೆ ಪ್ರದರ್ಶಿಸಿದ Rahul Gandhi; Video

ಮಾತು ನಿಲ್ಲಿಸಿದ್ದಕ್ಕೆ ಪ್ರೇಮಿಯನ್ನು ಇರಿದುಕೊಂದ ಮಹಿಳೆ!

SCROLL FOR NEXT