ಜಾತಿಗಣತಿ (ಸಂಗ್ರಹ ಚಿತ್ರ) 
ರಾಜ್ಯ

ಜಾತಿಗಣತಿ: ಜಿಬಿಎ ವ್ಯಾಪ್ತಿಯಲ್ಲಿ 10 ದಿನದಲ್ಲಿ 13.12 ಲಕ್ಷ ಮನೆಗಳ ಸಮೀಕ್ಷೆ ಪೂರ್ಣ..!

ಐದು ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 1,19,303 ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. ಆರಂಭದಲ್ಲಿ ದಿನಕ್ಕೆ 2 ಲಕ್ಷ ಮನೆಗಳ ಸಮೀಕ್ಷೆಯ ಗುರಿಯನ್ನು ನಿಗದಿಪಡಿಸಲಾಗಿತ್ತು. ನಂತರ ಅದನ್ನು 3 ಲಕ್ಷಕ್ಕೆ ಹೆಚ್ಚಿಲಾಯಿತು.

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ 10 ದಿನಗಳಲ್ಲಿ 13.16 ಲಕ್ಷ ಮನೆಗಳಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರು ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ 4 ರಿಂದ 13 ರವರೆಗೆ, 13,12,183 ಮನೆಗಳ ಸಮೀಕ್ಷೆ ಮಾಡಲಾಗಿದೆ. ಇನ್ನೂ 19 ಲಕ್ಷ ಮನೆಗಳ ಸಮೀಕ್ಷೆ ಬಾಕಿಯಿದ್ದು, ಮುಂದಿನ 5 ದಿನಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಸೋಮವಾರ, ಐದು ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 1,19,303 ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. ಆರಂಭದಲ್ಲಿ ದಿನಕ್ಕೆ 2 ಲಕ್ಷ ಮನೆಗಳ ಸಮೀಕ್ಷೆಯ ಗುರಿಯನ್ನು ನಿಗದಿಪಡಿಸಲಾಗಿತ್ತು. ನಂತರ ಅದನ್ನು 3 ಲಕ್ಷಕ್ಕೆ ಹೆಚ್ಚಿಲಾಯಿತು. ವಿವಿಧ ಸರ್ಕಾರಿ ಇಲಾಖೆಗಳಿಂದ ನಿಯೋಜಿಸಲಾದವರು ಸೇರಿದಂತೆ 18,000 ಸಿಬ್ಬಂದಿ ಲಭ್ಯವಿರುವುದರಿಂದ, ಗಣತಿದಾರರು ದೈನಂದಿನ ಗುರಿಯನ್ನು ಸಾಧಿಸಲು ಶ್ರಮಿಸುತ್ತಿದ್ದಾರೆಂದು ತಿಳಿಸಿದ್ದಾರೆ.

ಇಲ್ಲಿಯವರೆಗೆ, ಬೆಂಗಳೂರು ಕೇಂದ್ರದಲ್ಲಿ ಗಣತಿದಾರರು 1,71,075 ಮನೆಗಳನ್ನು ಸಮೀಕ್ಷೆ ನಡೆಸಿದ್ದರೆ, ಪೂರ್ವದಲ್ಲಿ 1,96,299, ಉತ್ತರದಲ್ಲಿ 3,20,931, ದಕ್ಷಿಣದಲ್ಲಿ 2,34,893 ಮತ್ತು ಪಶ್ಚಿಮದಲ್ಲಿ 3,92,985 ಮನೆಗಳನ್ನು ಸಮೀಕ್ಷೆಗೆ ನಡೆಸಲಾಗಿದೆ. ಎಲ್ಲಾ ನಾಗರಿಕರು ಸಮೀಕ್ಷೆಗೆ ಸಹಕರಿಸಲು ಮತ್ತು ಭಾಗವಹಿಸಲು ಮನವಿ ಮಾಡಲಾಗಿದೆ.

ತಾಂತ್ರಿಕ ದೋಷಗಳು, ಆರೋಗ್ಯ ಕಾಳಜಿಗಳು ಮತ್ತು ಕೆಲಸ ಕಳೆದುಕೊಳ್ಳುವ ಬೆದರಿಕೆ ಅಥವಾ ಮೇಲ್ವಿಚಾರಕರ ಒತ್ತಡದ ನಡುವೆಯೂ ಗಣತಿದಾರರು 13.16 ಲಕ್ಷ ಮನೆಗಳ ಸಮೀಕ್ಷೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಬರುವ ದಿನಗಳಲ್ಲಿ ಉಳಿದ ಮನೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಳೆ ಬೆಳಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ; ಕುತೂಹಲ ಕೆರಳಿಸಿದ CM, DCM ಬ್ರೇಕ್​ಫಾಸ್ಟ್ ಮೀಟಿಂಗ್

ಅಲ್ ಫಲಾಹ್ ಸ್ಥಾಪಕರಿಂದ ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಸ್ವಾಧೀನ : ತನಿಖೆಯಲ್ಲಿ ಬಯಲು

ಕೇರಳ: ಕೈಕೊಟ್ಟ ಕ್ರೇನ್, ಸ್ಕೈ ಡಿನ್ನಿಂಗ್ ಗಾಗಿ 150 ಅಡಿ ಎತ್ತರ ಇದ್ದವರ ಜೀವ ಉಳಿದಿದ್ದೇ ಹೆಚ್ಚು!

CM ಪಟ್ಟಕ್ಕಾಗಿ ಫೈಟ್: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಚಿಂತನೆ

ಪುಟಿದೆದ್ದ ಭಾರತದ ಆರ್ಥಿಕ ಬೆಳವಣಿಗೆ; ಆದರೆ ದ್ವಿತೀಯಾರ್ಧದಲ್ಲಿ ನಿಧಾನಗತಿಯ ಬಗ್ಗೆ ತಜ್ಞರ ಎಚ್ಚರಿಕೆ

SCROLL FOR NEXT