ಅಖ್ತರ್ ಬೇಗಂ, ಮೃತ ಶಿಕ್ಷಕಿ 
ರಾಜ್ಯ

ಕೋಲಾರ: ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ! ಕೊಲೆಯೋ, ಆತ್ಮಹತ್ಯೆಯೋ?

ಕೋಲಾರ ತಾಲೂಕಿನ ಬಿ ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಅಖ್ತರ್ ಬೇಗಂ ಕೋಲಾರದ ಮಹಾಲಕ್ಷ್ಮಿ ಬಡವಾಣೆಯ ನಿವಾಸಿಯಾಗಿದ್ದರು. ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ್ದರು.

ಕೋಲಾರ: ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಅಖ್ತರ್ ಬೇಗಂ ಮೃತಪಟ್ಟ ಮಹಿಳೆಯಾಗಿದ್ದಾರೆ. ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಅವರ ಶವ ಪತ್ತೆಯಾಗಿದೆ.

ಕೋಲಾರ ತಾಲೂಕಿನ ಬಿ ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಅಖ್ತರ್ ಬೇಗಂ ಕೋಲಾರದ ಮಹಾಲಕ್ಷ್ಮಿ ಬಡವಾಣೆಯ ನಿವಾಸಿಯಾಗಿದ್ದರು. ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ್ದರು.

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಶಿಕ್ಷಕಿ ಸುಳಿವು ಸಿಕ್ಕಿರಲಿಲ್ಲ. ಈ ಸಂಬಂಧ ಕೋಲಾರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಜಾತಿ ಗಣತಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಒತ್ತಡದ ಕಾರಣದಿಂದ ಮಾನಸಿಕವಾಗಿ ಸಮಸ್ಯೆ ಎದುರಿಸುತ್ತಿದ್ದರು ಎಂದು ಮೂಲಗಳು ಹೇಳಿವೆ. ಇದು ಸಮೀಕ್ಷೆಯಲ್ಲಿ ತೊಡಗಿರುವ ಶಿಕ್ಷಕರಲ್ಲಿ ಸುರಕ್ಷತೆ ಬಗ್ಗೆ ಭೀತಿ ಉಂಟು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅವಿಶ್ವಾಸ ನಿರ್ಣಯ ಚರ್ಚೆಯಾಗೋವರೆಗೂ ನಾನು ಸದನವನ್ನು ಪ್ರವೇಶಿಸಲ್ಲ, ಸ್ಪೀಕರ್ ಸ್ಥಾನದಲ್ಲಿ ಕೂರಲ್ಲ: ಓಂ ಬಿರ್ಲಾ ಪ್ರತಿಜ್ಞೆ

ನನ್ನ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ: ಪ್ರಕಾಶಕರ ಬೆಂಬಲಕ್ಕೆ ನಿಂತ ಮಾಜಿ ಸೇನಾ ಮುಖ್ಯಸ್ಥ ನರವಾಣೆ

ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ

ಟಿ20 ವಿಶ್ವಕಪ್ 2026: ತಾರಿಖ್ ಭರ್ಜರಿ ಬೌಲಿಂಗ್, USA ವಿರುದ್ಧ ಪಾಕಿಸ್ತಾನಕ್ಕೆ 32 ರನ್ ಜಯ

ರಾಹುಲ್ ಗಾಂಧಿಯನ್ನೇ ಪದಚ್ಯುತಿಗೊಳಿಸುವ ಸಮಯ ಬಂದಿದೆ: ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ಕಿಡಿ

SCROLL FOR NEXT