ಸಂಗ್ರಹ ಚಿತ್ರ 
ರಾಜ್ಯ

ಬಾಂಬ್ ಬೆದರಿಕೆ ಇಮೇಲ್: ತನಿಖೆಗೆ ವಿಶೇಷ ತಂಡ ರಚನೆ

ಹೆಚ್ಚಿನ ಬೆದರಿಕೆ ಸಂದೇಶಗಳಲ್ಲಿ ತಮಿಳುನಾಡಿನ ಪ್ರಮುಖ ರಾಜಕಾರಣಿಗಳು ಮತ್ತು ಪತ್ರಕರ್ತರ ಹೆಸರುಗಳು ಉಲ್ಲೇಖಿಸಲ್ಪಟ್ಟಿದ್ದು, ಅಲ್ಲಿಂದಲೇ ಬೆದರಿಕೆಗಳು ಬರುತ್ತಿರಬಹುದು ಎಂಬ ಅನುಮಾನಗಳು ಹೆಚ್ಚಾಗಿವೆ.

ಬೆಂಗಳೂರು: ವಿವಿಧ ಸಂಸ್ಥೆ ಹಾಗೂ ಸ್ಥಳಗಳಿಗೆ ಹಲವಾರು ಬಾಂಬ್ ಬೆದರಿಕೆ ಇಮೇಲ್ ಗಳು ಬರುತ್ತಿದ್ದು, ಈ ಬಗ್ಗೆ ನಗರದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಗೆ ವಿಶೇಷ ತಂಡವನ್ನು ರಚಿಸಿದ್ದಾರೆ,

ಕೆಲ ಶಾಲೆಗಳು, ಸರ್ಕಾರಿ ಕಚೇರಿಗಳಿಗೆ ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಬಾಂಬ್‌ ಬರುತ್ತಲೇ ಇದೆ. ಬೆಂಗಳೂರು ಒಂದರಲ್ಲೇ 34 ಪ್ರಕರಣಗಳು ದಾಖಲಾಗಿವೆ. ಮುಂಬೈನಲ್ಲಿ 27, ಚೆನ್ನೈ 22 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಬಾಂಬ್‌ ಬೆದರಿಕೆಗಳನ್ನು ತಪ್ಪಿಸಲು ಹಾಗೂ ಹುಸಿ ಬೆದರಿಕೆಯೊಡ್ಡುವವರ ಹೆಡೆಮುರಿ ಕಟ್ಟಲು ವಿಶೇಷ ತನಿಖಾ ತಂಡ ರಚನೆ ಮಾಡಿದ್ದಾರೆ.

ಬೆದರಿಕೆ ಸಂದೇಶ ರವಾನೆಯ ಮೂಲ ಪತ್ತೆ ಮಾಡುವುದು ತನಿಖಾ ತಂಡದ ಗುರಿಯಾಗಿದ್ದು, ವಿವರವಾದ ತಾಂತ್ರಿಕ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತನಿಖಾ ತಂಡಕ್ಕೆ ಉಪ ಪೊಲೀಸ್ ಆಯುಕ್ತ (ಡಿಸಿಪಿ) ದರ್ಜೆಯ ಅಧಿಕಾರಿಯೊಬ್ಬರು ನೇತೃತ್ವ ವಹಿಸಿದ್ದಾರೆ. ಬೆಂಗಳೂರಿನಲ್ಲಿರುವ ಖಾಸಗಿ ಶಾಲೆಗಳು, ವಿಮಾನ ನಿಲ್ದಾಣ, ಹೋಟೆಲ್‌ಗಳು ಮತ್ತು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಿವಾಸಗಳಿಗೆ ಕಳುಹಿಸಲಾದ ಬಾಂಬ್ ಬೆದರಿಕೆ ಸಂದೇಶಗಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 38 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ದೇಶಾದ್ಯಂತ, ಇಂತಹ 100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಪ್ರಕರಣಗಳು ವರದಿಯಾಗಿವೆ ಎಂದು ಹೇಳಿದ್ದಾರೆ.

ಹೆಚ್ಚಿನ ಬೆದರಿಕೆ ಸಂದೇಶಗಳಲ್ಲಿ ತಮಿಳುನಾಡಿನ ಪ್ರಮುಖ ರಾಜಕಾರಣಿಗಳು ಮತ್ತು ಪತ್ರಕರ್ತರ ಹೆಸರುಗಳು ಉಲ್ಲೇಖಿಸಲ್ಪಟ್ಟಿದ್ದು, ಅಲ್ಲಿಂದಲೇ ಬೆದರಿಕೆಗಳು ಬರುತ್ತಿರಬಹುದು ಎಂಬ ಅನುಮಾನಗಳು ಹೆಚ್ಚಾಗಿವೆ. ಹೀಗಾಗಿ ಬೆದರಿಕೆ ಸಂದೇಶ ಕಳುಹಿಸುವವರ ಐಪಿ ವಿಳಾಸಗಳನ್ನು ಪತ್ತೆ ಹಚ್ಚುವತ್ತ ಪೊಲೀಸರು ಗಮನಹರಿಸಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gujarat: ಒಂದು ಕಾಲದ ಬಿಜೆಪಿ ವಿರೋಧಿಗಳಿಗೆ ಒಲಿದ ಸಚಿವ ಸ್ಥಾನ?: ನೂತನ ಸಂಪುಟದಲ್ಲಿ ಅಲ್ಪೇಶ್ ಠಾಕೂರ್, ಹಾರ್ದಿಕ್ ಪಟೇಲ್!

ಜಾಗತಿಕ ಸೇನಾ ಬಲ: ಚೀನಾವನ್ನು ಹಿಂದಿಕ್ಕಿದ ಭಾರತ! ಅಮೆರಿಕ, ರಷ್ಯಾ ನಂತರ 3ನೇ ಅತಿ ಬಲಿಷ್ಠ ಸೇನೆ!

RSS ಚಟುವಟಿಕೆಗಳಿಗೆ ಕಡಿವಾಣ: BJP ಆದೇಶವನ್ನೇ ಅಸ್ತ್ರವಾಗಿ ಬಳಸಿದ Congress; ಸಚಿವ ಸಂಪುಟದಲ್ಲಿ​​ ಮಹತ್ವದ ತೀರ್ಮಾನ!

ನಮ್ಮ ಆದ್ಯತೆಗಳಿಗೆ ತಕ್ಕಂತೆ ವ್ಯವಹಾರ: ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಭಾರತದ ತಿರುಗೇಟು!

ರಾಜ್ಯದಲ್ಲಿ ಒಪ್ಪಂದವಿಲ್ಲದೆ 'ಮನೆಗೆಲಸದವರ' ನೇಮಕ ಮಾಡಿಕೊಳ್ಳುವಂತಿಲ್ಲ: ಕರಡು ಮಸೂದೆಯಲ್ಲಿ ಏನಿದೆ?

SCROLL FOR NEXT