ಬೈಕ್ ಸವಾರನ ಕೆನ್ನೆಗೆ ಭಾರಿಸಿದ ಸಂಚಾರಿ ಪೊಲೀಸ್ 
ರಾಜ್ಯ

ರಸ್ತೆಯಲ್ಲೇ ಬೈಕ್ ಸವಾರನಿಗೆ ಬೆಂಗಳೂರು ಸಂಚಾರಿ ಪೊಲೀಸ್ ಕಪಾಳಮೋಕ್ಷ; Video Viral

ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್ ಸವಾರನಿಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಪಾಳ ಮೋಕ್ಷ ಮಾಡಿರುವ ವಿಡಿಯೊವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ. ಈ ವೇಳೆ ದಾಖಲೆ ಪರಿಶೀಲನೆ ಮಾಡುವಾಗ ಅಧಿಕಾರಿ ಮತ್ತು ಬೈಕ್ ಸವಾರನ ನಡುವೆ ಬಿಸಿ ವಾಗ್ವಾದ ನಡೆದಿದೆ.

ಈ ವೇಳೆ ನೋಡ ನೋಡುತ್ತಲೇ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೈಕ್ ಸವಾರನೆ ಕೆನ್ನೆಗೆ ಭಾರಿಸಿದ್ದಾರೆ. ಈ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಪೊಲೀಸ್ ಅಧಿಕಾರಿಯ ಕೃತ್ಯ ಕಾನೂನು ಬಾಹಿರ ಎಂದು ಕೆಲ ನೆಟ್ಟಿಗರು ಆಕ್ರೋಶ ವ್ಕಕ್ತಪಡಿಸುತ್ತಿದ್ದು, ಯಾವುದೇ ಅಧಿಕಾರವಿಲ್ಲದಿದ್ದರೂ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿರುವುದು ಅಕ್ಷಮ್ಯ. ಅವರ ವಿರುದ್ಧ ಇಲಾಖೆಯ ಹಿರಿಯ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ. ಮತ್ತೊಬ್ಬ ಬಳಕೆದಾರ ಅಧಿಕಾರಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಒಬ್ಬ ಬಳಕೆದಾರರು, “ತುಂಬಾ ಕೆಟ್ಟ ನಡವಳಿಕೆ” ಎಂದು ಕಾಮೆಂಟ್ ಮಾಡಿದರೆ, ಇನ್ನೊಬ್ಬರು, “ಟ್ರಾಫಿಕ್ ನಿಯಂತ್ರಿಸುವ ಬದಲು, ಈ ಜನರು ಸವಾರರನ್ನು ಏಕೆ ಹೊಡೆಯುತ್ತಿದ್ದಾರೆ?” ಎಂದು ಬರೆದಿದ್ದಾರೆ. ಮೂರನೆಯವರು, “ಈ ಪೊಲೀಸ್ ವ್ಯಕ್ತಿ ಸಾಮಾನ್ಯ ಮನುಷ್ಯನನ್ನು ಹೊಡೆಯಲು ಎಷ್ಟು ಧೈರ್ಯ? ದಯವಿಟ್ಟು ಈ ಗುಂಡಾ ಪೊಲೀಸರ ಮೇಲೆ ಕಠಿಣ ಕ್ರಮ ಕೈಗೊಳ್ಳಿ. ಇಲಾಖೆಯಲ್ಲಿ ನಮಗೆ ಅಂತಹ ಗುಂಡಾಗಳು ಅಗತ್ಯವಿಲ್ಲ” ಎಂದು ಕೇಳಿದರು.

ಬೆಂಗಳೂರು ಸಂಚಾರ ಪೊಲೀಸರು ಈ ಘಟನೆಯ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

'ನಿಮಗೆ ಹೃದಯಾಘಾತವಾಗಬಹುದು': ಟ್ರಂಪ್ ಶಾಂತಿ ಯೋಜನೆಯನ್ನು ತಿರಸ್ಕರಿಸಿದ ಬೆನ್ನಲ್ಲೇ ಶಸ್ತ್ರಾಸ್ತ್ರ ಪರೀಕ್ಷೆ ನಡೆಸಿದ ಇರಾನ್ ಎಚ್ಚರಿಕೆ

ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆ- ಪ್ರಿಯಾಂಕ್ ಖರ್ಗೆ!

ಪಶ್ಚಿಮ ಬಂಗಾಳದ 77 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ದೂರು: ಚುನಾವಣಾ ಆಯೋಗದಿಂದ ಪರಿಶೀಲನೆ!

SCROLL FOR NEXT