ಬೈಕ್ ಸವಾರನ ಕೆನ್ನೆಗೆ ಭಾರಿಸಿದ ಸಂಚಾರಿ ಪೊಲೀಸ್ 
ರಾಜ್ಯ

ರಸ್ತೆಯಲ್ಲೇ ಬೈಕ್ ಸವಾರನಿಗೆ ಬೆಂಗಳೂರು ಸಂಚಾರಿ ಪೊಲೀಸ್ ಕಪಾಳಮೋಕ್ಷ, Video Viral

ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್ ಸವಾರನಿಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಪಾಳ ಮೋಕ್ಷ ಮಾಡಿರುವ ವಿಡಿಯೊವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ. ಈ ವೇಳೆ ದಾಖಲೆ ಪರಿಶೀಲನೆ ಮಾಡುವಾಗ ಅಧಿಕಾರಿ ಮತ್ತು ಬೈಕ್ ಸವಾರನ ನಡುವೆ ಬಿಸಿ ವಾಗ್ವಾದ ನಡೆದಿದೆ.

ಈ ವೇಳೆ ನೋಡ ನೋಡುತ್ತಲೇ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೈಕ್ ಸವಾರನೆ ಕೆನ್ನೆಗೆ ಭಾರಿಸಿದ್ದಾರೆ. ಈ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಪೊಲೀಸ್ ಅಧಿಕಾರಿಯ ಕೃತ್ಯ ಕಾನೂನು ಬಾಹಿರ ಎಂದು ಕೆಲ ನೆಟ್ಟಿಗರು ಆಕ್ರೋಶ ವ್ಕಕ್ತಪಡಿಸುತ್ತಿದ್ದು, ಯಾವುದೇ ಅಧಿಕಾರವಿಲ್ಲದಿದ್ದರೂ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿರುವುದು ಅಕ್ಷಮ್ಯ. ಅವರ ವಿರುದ್ಧ ಇಲಾಖೆಯ ಹಿರಿಯ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ. ಮತ್ತೊಬ್ಬ ಬಳಕೆದಾರ ಅಧಿಕಾರಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಒಬ್ಬ ಬಳಕೆದಾರರು, “ತುಂಬಾ ಕೆಟ್ಟ ನಡವಳಿಕೆ” ಎಂದು ಕಾಮೆಂಟ್ ಮಾಡಿದರೆ, ಇನ್ನೊಬ್ಬರು, “ಟ್ರಾಫಿಕ್ ನಿಯಂತ್ರಿಸುವ ಬದಲು, ಈ ಜನರು ಸವಾರರನ್ನು ಏಕೆ ಹೊಡೆಯುತ್ತಿದ್ದಾರೆ?” ಎಂದು ಬರೆದಿದ್ದಾರೆ. ಮೂರನೆಯವರು, “ಈ ಪೊಲೀಸ್ ವ್ಯಕ್ತಿ ಸಾಮಾನ್ಯ ಮನುಷ್ಯನನ್ನು ಹೊಡೆಯಲು ಎಷ್ಟು ಧೈರ್ಯ? ದಯವಿಟ್ಟು ಈ ಗುಂಡಾ ಪೊಲೀಸರ ಮೇಲೆ ಕಠಿಣ ಕ್ರಮ ಕೈಗೊಳ್ಳಿ. ಇಲಾಖೆಯಲ್ಲಿ ನಮಗೆ ಅಂತಹ ಗುಂಡಾಗಳು ಅಗತ್ಯವಿಲ್ಲ” ಎಂದು ಕೇಳಿದರು.

ಬೆಂಗಳೂರು ಸಂಚಾರ ಪೊಲೀಸರು ಈ ಘಟನೆಯ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

RSS ಚಟುವಟಿಕೆಗಳಿಗೆ ಕಡಿವಾಣ: BJP ಆದೇಶವನ್ನೇ ಅಸ್ತ್ರವಾಗಿ ಬಳಸಿದ Congress; ಸಚಿವ ಸಂಪುಟದಲ್ಲಿ​​ ಮಹತ್ವದ ತೀರ್ಮಾನ!

ರಾಜ್ಯದಲ್ಲಿ ಒಪ್ಪಂದವಿಲ್ಲದೆ 'ಮನೆಗೆಲಸದವರ' ನೇಮಕ ಮಾಡಿಕೊಳ್ಳುವಂತಿಲ್ಲ: ಕರಡು ಮಸೂದೆಯಲ್ಲಿ ಏನಿದೆ?

ನಮ್ಮ ಆದ್ಯತೆಗಳಿಗೆ ತಕ್ಕಂತೆ ವ್ಯವಹಾರ: ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಭಾರತದ ತಿರುಗೇಟು!

RSS ಚುಟುವಟಿಕೆ ನಿರ್ಬಂಧಕ್ಕೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಬಂಧನ

ರಾಜ್ಯದಲ್ಲಿ ಇಳುವರಿ, ಗುಣಮಟ್ಟ ಕುಸಿತ: ಕರ್ನಾಟಕಕ್ಕೆ ಶ್ರೀಗಂಧದ ಎಣ್ಣೆ ರಫ್ತು ಮಾಡುತ್ತಿದೆ ಆಸ್ಟ್ರೇಲಿಯಾ!

SCROLL FOR NEXT