ಸಚಿವ ಸಂತೋಷ್ ಲಾಡ್ 
ರಾಜ್ಯ

'ಜಾತಿ ಗಣತಿಯಲ್ಲಿ ಭಾಗವಹಿಸದಿರುವ ಸುಧಾ ಮೂರ್ತಿ ಆಯ್ಕೆಯನ್ನು ಗೌರವಿಸುತ್ತೇನೆ'

ಅವರು ಏನೇ ಹೇಳಿದ್ದರೂ, ಅದು ಅಭಿವ್ಯಕ್ತಿಯ ಒಂದು ಭಾಗ. ಅದು ಅವರ ಆಯ್ಕೆ. ಸರ್ಕಾರವಾಗಿ, ನಾವು ಯಾರನ್ನೂ ಇದರಲ್ಲಿ ಭಾಗವಹಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ. ಅದು ಅವರ ಆಯ್ಕೆಗೆ ಬಿಟ್ಟ ವಿಚಾರ.

ಬೆಂಗಳೂರು: ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರು ಜಾತಿ ಜನಗಣತಿ ಎಂದೇ ಕರೆಯಲಾಗುತ್ತಿರುವ ಸಾಮಾಜಿಕ-ಆರ್ಥಿಕ ಸಮೀಕ್ಷೆಯಲ್ಲಿ ಭಾಗವಹಿಸದಿರುವ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ಮತ್ತು ಕಾರ್ಮಿಕ ಸಚಿವೆ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ.

"ಅವರು ಏನೇ ಹೇಳಿದ್ದರೂ, ಅದು ಅಭಿವ್ಯಕ್ತಿಯ ಒಂದು ಭಾಗ. ಅದು ಅವರ ಆಯ್ಕೆ. ಸರ್ಕಾರವಾಗಿ, ನಾವು ಯಾರನ್ನೂ ಇದರಲ್ಲಿ ಭಾಗವಹಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ. ಅದು ಅವರ ಆಯ್ಕೆಗೆ ಬಿಟ್ಟ ವಿಚಾರ. ನಾವು ಅದನ್ನು ಗೌರವಿಸುತ್ತೇವೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.

ಸುಧಾ ಮೂರ್ತಿ ಅವರ ನಿರ್ಧಾರ ಸಮಾಜದ ಮೇಲೆ ಯಾವುದೇ ಪರಿಣಾಮ ಬೀರುತ್ತದೆ ಎಂದು ನಾನು ಭಾವಿಸುವುದಿಲ್ಲ. ಅವರು ತಮ್ಮ ನಿಲುವನ್ನು ತೆಗೆದುಕೊಂಡಿದ್ದರೆ, ನಾನು ಅವರನ್ನು ಗೌರವಿಸುತ್ತೇನೆ" ಎಂದು ಅವರು ಹೇಳಿದರು.

ಸುಧಾ ಮೂರ್ತಿ ಮತ್ತು ಅವರ ಪತಿ ಮತ್ತು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ನಡೆಸುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ ನಂತರ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಬರೆದ ಸ್ವಯಂ ದೃಢೀಕೃತ ಪತ್ರದಲ್ಲಿ, ಸುಧಾ ಮೂರ್ತಿ ಅವರು, ತಾವು ಹಿಂದುಳಿದ ಸಮುದಾಯಕ್ಕೆ ಸೇರಿದವರಲ್ಲ. ಆದ್ದರಿಂದ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಪತ್ರದಲ್ಲಿ, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರು ವೈಯಕ್ತಿಕ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ. "ನಾವು ಮತ್ತು ನಮ್ಮ ಕುಟುಂಬ ಜನಗಣತಿಯಲ್ಲಿ ಭಾಗವಹಿಸುವುದಿಲ್ಲ ಮತ್ತು ನಾವು ಅದನ್ನು ಈ ಪತ್ರದ ಮೂಲಕ ದೃಢೀಕರಿಸುತ್ತಿದ್ದೇವೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?