ಬಂಧನ online desk
ರಾಜ್ಯ

RSS ಚುಟುವಟಿಕೆ ನಿರ್ಬಂಧಕ್ಕೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಬಂಧನ

ಬೆದರಿಕೆ ಕರೆ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರು ಕೇಂದ್ರ ವಿಭಾಗ ಮತ್ತು ಕಲಬುರಗಿ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರು: ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆಯೊಡ್ಡಿದ್ದ ಮಹಾರಾಷ್ಟ್ರದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆದರಿಕೆ ಕರೆ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರು ಕೇಂದ್ರ ವಿಭಾಗ ಮತ್ತು ಕಲಬುರಗಿ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿಯನ್ನು ಧನೇಶ್ ನರೋಣೆ ಅಲಿಯಾಸ್ ದಾನಪ್ಪ ನರೋಣೆ ಎಂದು ಗುರುತಿಸಲಾಗಿದ್ದು, ಈತ ಕರ್ನಾಟಕದ ಗಡಿ ಜಿಲ್ಲೆಯಾಗಿರುವ ಮಹಾರಾಷ್ಟ್ರದ ಸೋಲಾಪುರದವನೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಫೋನ್ ಕರೆಯ ನಂತರ, ಆತ ತನ್ನ ಊರು ಬಿಟ್ಟು ಲಾತೂರ್‌ನಲ್ಲಿ ಅಡಗಿಕೊಂಡಿದ್ದ. ಬೆಂಗಳೂರು ಮತ್ತು ಕಲಬುರಗಿ ಪೊಲೀಸ್ ತಂಡವು ಆತನನ್ನು ಪತ್ತೆಹಚ್ಚಿ, ಬಂಧಿಸಿ ಬೆಂಗಳೂರಿಗೆ ಕರೆತಂದಿದೆ.

ಪೊಲೀಸ್ ಮೂಲಗಳ ಪ್ರಕಾರ, ಆತ ಬಿಸ್ಕತ್ತು ಮತ್ತು ಮಿಠಾಯಿ ತಯಾರಿಕಾ ಕಂಪನಿಗಳಿಗೆ ಮಾರ್ಕೆಟಿಂಗ್ ಏಜೆಂಟ್ ಆಗಿ ಕೆಲಸ ಮಾಡುತ್ತಾನೆ. ಅವನು ಸರ್ಚ್ ಇಂಜಿನ್ ಬಳಸಿ ಖರ್ಗೆಯವರ ಫೋನ್ ನಂಬರ್ ಅನ್ನು ಪಡೆದಿದ್ದಾನೆ.

ಆರೋಪಿ ಈ ಹಿಂದೆ ಯಾವುದೇ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆಯೇ ಎಂಬುದನ್ನು ಪತ್ತೆಹಚ್ಚಲು ಆತನನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ, ಅವರನ್ನು ನಿಂದಿಸುತ್ತಿರುವ ಮತ್ತು ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕುತ್ತಿರುವ ವಿಡಿಯೋವನ್ನು ಸಚಿವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದರು.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಕ್ಕಾಗಿ ಆರೋಪಿ ಸಚಿವರನ್ನು ನಿಂದಿಸಿದ್ದಾನೆ.

ಇದೆಲ್ಲದರ ನಡುವೆ, ಕರ್ನಾಟಕ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳನ್ನು ಉಲ್ಲೇಖಿಸಿ, ಆರ್‌ಎಸ್‌ಎಸ್ ಮತ್ತು ಇತರ ಸಂಘಟನೆಗಳು ಆಯೋಜಿಸುವ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಅವರು ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರವನ್ನು ಬರೆದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆಂಗಳೂರು ಬಿಸಿನೆಸ್ ಕಾರಿಡಾರ್ ಗೆ ಸಂಪುಟ ಅನುಮೋದನೆ; ಎರಡು ವರ್ಷದಲ್ಲಿ ಪೂರ್ಣ

ರಷ್ಯಾ ತೈಲ ಖರೀದಿ ವಿಷಯವಾಗಿ ಮೋದಿ ಟ್ರಂಪ್ ಜೊತೆ ಮಾತಾಡೇ ಇಲ್ಲ- EAM

Gujarat: ಒಂದು ಕಾಲದ ಬಿಜೆಪಿ ವಿರೋಧಿಗಳಿಗೆ ಒಲಿದ ಸಚಿವ ಸ್ಥಾನ?: ನೂತನ ಸಂಪುಟದಲ್ಲಿ ಅಲ್ಪೇಶ್ ಠಾಕೂರ್, ಹಾರ್ದಿಕ್ ಪಟೇಲ್!

ಅಕ್ರಮ ಗಣಿಗಾರಿಕೆ ವಿರೋಧಿಸಿದ್ದಕ್ಕೆ ದಲಿತ ವ್ಯಕ್ತಿ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ!

KPCC ಯಲ್ಲಿ ಕೆಲಸದಲ್ಲಿರುವುದಾಗಿ ನಂಬಿಸಿ ಮಹಿಳೆಯರ ಜೊತೆ ರಾಸಲೀಲೆ: ಗಂಡನ S**X ವಿಡಿಯೋ ನೋಡಿ ದಂಗಾದ ಪತ್ನಿ!

SCROLL FOR NEXT