ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿಯಲ್ಲಿ ಅಣ್ಣ-ತಂಗಿ ನೇಣಿಗೆ ಶರಣು; ಆತ್ಮಹತ್ಯೆಗೆ ಕಾರಣ ನಿಗೂಢ

ಮೃತರನ್ನು ಮಲ್ಲೇಶ್(23) ಮತ್ತು ಪವಿತ್ರಾ(17) ಎಂದು ಗುರುತಿಸಲಾಗಿದ್ದು, ಪವಿತ್ರಾ ಅವರ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಉಡುಪಿ: ಅಣ್ಣ-ತಂಗಿ ಇಬ್ಬರೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶುಕ್ರವಾರ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ.

ಮೃತರನ್ನು ಮಲ್ಲೇಶ್(23) ಮತ್ತು ಪವಿತ್ರಾ(17) ಎಂದು ಗುರುತಿಸಲಾಗಿದ್ದು, ಪವಿತ್ರಾ ಅವರ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು, ಇವರು ಸ್ವಂತಃ ಅಣ್ಣ-ತಂಗಿ ಅಲ್ಲ. ಆದರೆ ಅಕ್ಕ, ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಬೇರೊಂದು ಮನೆಯಲ್ಲಿ ಕೆಲಸ ಮಾಡಿ , ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ ಪಿಯುಸಿ ಓದುತ್ತಿದ್ದರು. ಸಹೋದರ ಸಂಬಂಧಿ ಮಲ್ಲೇಶ ವಾರದ ಹಿಂದಷ್ಟೇ ಗಾರೆ ಕೆಲಸಕ್ಕೆ ಎಂದು ಉಡುಪಿಗೆ ಬಂದಿದ್ದ. ಆತನ ತಾಯಿ ಮತ್ತು ಪವಿತ್ರಾ ಅವರ ತಾಯಿ ಹನುಮವ್ವ ಅಕ್ಕ-ತಂಗಿಯಾಗಿರುವ ಕಾರಣ ಚಿಕ್ಕಮ್ಮನ ಮನೆಯಲ್ಲೇ ಉಳಿದುಕೊಂಡಿದ್ದ.

ಹನುಮವ್ವ ರಾಯಚೂರಿಗೆ ಹೋಗಿದ್ದ ಸಂದರ್ಭ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

Ro-Ko ಕಟ್ಟಿಹಾಕಿದ ಆಸೀಸ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ಸೋತ Team India

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

ದೊಡ್ಡವರ ಮನೆಗೆ ಹೋಗಬಾರದಿತ್ತು: ಶಾರುಖ್ ಖಾನ್ ಮನೆ ಪಾರ್ಟಿಯಲ್ಲಿ ಆದ ಕಹಿ ಅನುಭವ ಬಿಚ್ಚಿಟ್ಟ ನಟ ಗುಲ್ಶನ್ ದೇವಯ್ಯ!

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

SCROLL FOR NEXT