ಗಣವೇಷಧಾರಿಯಾಗಿ ಪಿಡಿಒ ಪ್ರವೀಣ್ ಕುಮಾರ್ 
ರಾಜ್ಯ

ರಾಯಚೂರು: RSS ಪಥಸಂಚಲನದಲ್ಲಿ ಭಾಗಿ; PDO ಅಮಾನತು!

ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

ರಾಯಚೂರು: ರಾಜ್ಯದಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಚಟುವಟಿಕೆಗಳಿಗೆ ಬ್ರೇಕ್ ಹಾಗೂ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸರ್ಕಾರಿ ನೌಕರರ ವಿರುದ್ಧದ ಸರ್ಕಾರದ ಕ್ರಮದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಗಣವೇಷಧಾರಿಯಾಗಿ 'ಆರ್ ಎಸ್ ಎಸ್' ಪಥ ಸಂಚಲನದಲ್ಲಿ ಭಾಗಿಯಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

ಇದೇ ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.

ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್