ಗಣವೇಷಧಾರಿಯಾಗಿ ಪಿಡಿಒ ಪ್ರವೀಣ್ ಕುಮಾರ್ 
ರಾಜ್ಯ

ರಾಯಚೂರು: RSS ಪಥಸಂಚಲನದಲ್ಲಿ ಭಾಗಿ; PDO ಅಮಾನತು!

ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

ರಾಯಚೂರು: ರಾಜ್ಯದಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಚಟುವಟಿಕೆಗಳಿಗೆ ಬ್ರೇಕ್ ಹಾಗೂ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸರ್ಕಾರಿ ನೌಕರರ ವಿರುದ್ಧದ ಸರ್ಕಾರದ ಕ್ರಮದ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಗಣವೇಷಧಾರಿಯಾಗಿ 'ಆರ್ ಎಸ್ ಎಸ್' ಪಥ ಸಂಚಲನದಲ್ಲಿ ಭಾಗಿಯಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

ಇದೇ ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.

ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT