ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಜಲ ಸಮಾಧಿ

ಮಕ್ಕಳು ತುಂಬ ಹೊತ್ತಾದರೂ ಕಾಣಿಸದೇ ಇದ್ದಾಗ ಚಪ್ಪಲಿ ಗಮನಿಸಿ, ಹೊಂಡದಲ್ಲಿ ಶೋಧ ನಡೆಸಿದ ಬಳಿಕ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಸ್ವಪ್ನಾ, ಶಿವಂ ಒಂದೇ ಕುಟುಂಬದವರು.

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಅ. 16ರಂದು ನಡೆದಿದೆ.

ಮೃತರನ್ನು ಸ್ವಪ್ನಾ ರಾಜು ರಾಠೋಡ್ (10), ಶಿವಂ ರಾಜು ರಾಠೋಡ್ (8) ಹಾಗೂ ಕಾರ್ತಿಕ ಈಶ್ವರ ರಾಠೋಡ್ (8) ಎಂದು ಗುರುತಿಸಲಾಗಿದೆ. ಮಿಂಚನಾಳ ತಾಂಡಾದ ಮಾದೇವ ನಗರದ ಈ ಮೂವರು ಮಕ್ಕಳು ಮನೆಯ ಸಮೀಪದ ಹೊಲದ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮಕ್ಕಳು ತುಂಬ ಹೊತ್ತಾದರೂ ಕಾಣಿಸದೇ ಇದ್ದಾಗ ಚಪ್ಪಲಿ ಗಮನಿಸಿ, ಹೊಂಡದಲ್ಲಿ ಶೋಧ ನಡೆಸಿದ ಬಳಿಕ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಸ್ವಪ್ನಾ, ಶಿವಂ ಒಂದೇ ಕುಟುಂಬದವರು.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೂವರು ಮಕ್ಕಳ ಮೃತದೇಹಗಳನ್ನು ಹೊರತೆಗೆದಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸಂಜೆ ಮಕ್ಕಳು ಕುರಿಗಳೊಂದಿಗೆ ಆಟವಾಡುತ್ತಾ ಕೃಷಿ ಹೊಂಡದ ಬಳಿ ತೆರಳಿದ್ದರು. ಆಟದ ವೇಳೆ ಕಾಲು ಜಾರಿ ಆಯತಪ್ಪಿ ಮೂವರು ಒಟ್ಟಿಗೆ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಮೇಲೆ ಬರಲಾಗದೆ, ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಲಬುರಗಿ: ಚಿತ್ತಾಪುರದಲ್ಲಿ RSS ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್, ಭಗವಾಧ್ವಜ ತೆರವು; BJP ಕಿಡಿ

ಬೆಂಗಳೂರು: 8 ದಿನಗಳಿಂದ ಪ್ರೇಯಸಿ ಜತೆ ಖಾಸಗಿ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ನಿಗೂಢ ಸಾವು, Girlfriend ಎಸ್ಕೇಪ್!

ಸನಾತನಿಗಳ ಸಹವಾಸದಿಂದ ದೂರ ಇರಿ; RSS, ಸಂಘ ಪರಿವಾರದ ಬಗ್ಗೆ ಜಾಗರೂಕರಾಗಿರಿ: ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ

ಜಾರ್ಖಂಡ್: ಮಿತಿ ಮೀರಬೇಡಿ; ನ್ಯಾಯಾಂಗದ ಬಗ್ಗೆ ದೇಶ ಹೊತ್ತಿ ಉರೀತಿದೆ: ಹೈಕೋರ್ಟ್ ಜಡ್ಜ್ ಗೇ ಝಾಡಿಸಿದ ವಕೀಲ!

ಶಾಂತಿಯೋ? ಪ್ರಕ್ಷುಬ್ಧತೆಯೋ?: ತಾಲಿಬಾನ್ ಗೆ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಕೊಟ್ಟ ವಾರ್ನಿಂಗ್ ಏನು?

SCROLL FOR NEXT