ಹೊಂಗನೂರು ಗ್ರಾಮ ಪಂಚಾಯಿತಿ ಕಾರ್ಯಾಲಯ 
ರಾಜ್ಯ

ಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲೇ 'ವಾಟರ್ ಮ್ಯಾನ್' ಆತ್ಮಹತ್ಯೆ!

ಹಲವು ಬಾರಿ ಮನವಿ ಮಾಡಿದರೂ ಪಂಚಾಯಿತಿ ಅಧ್ಯಕ್ಷೆಯ ಪತಿ ಮೋಹನ್‌ಕುಮಾರ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮೇಗೌಡ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು 27 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಚಾಮರಾಜನಗರ: ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಕಿರುಕುಳ ಹಾಗೂ 27 ತಿಂಗಳಿಂದ ಸಂಬಳ ಸಿಗದೆ ಮನನೊಂದ 'ವಾಟರ್ ಮ್ಯಾನ್' ಪಂಚಾಯಿತಿ ಕಚೇರಿಯ ಕಿಟಕಿ ಗ್ರಿಲ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಂಗನೂರಿನಲ್ಲಿ ನಡೆದಿದೆ.

ಮೃತರನ್ನು ಚಿಕ್ಕೂಸಾ ನಾಯಕ್ ಎಂದು ಗುರುತಿಸಲಾಗಿದೆ. ಒಂಬತ್ತು ವರ್ಷಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿದ್ದ ಅವರಿಗೆ ಮೂವರು ಮಕ್ಕಳಿದ್ದಾರೆ.

ಹಲವು ಬಾರಿ ಮನವಿ ಮಾಡಿದರೂ ಪಂಚಾಯಿತಿ ಅಧ್ಯಕ್ಷೆಯ ಪತಿ ಮೋಹನ್‌ಕುಮಾರ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮೇಗೌಡ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು 27 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಮೋಹನ್ ಕುಮಾರ್ ಮತ್ತು ರಾಮೇಗೌಡ ಕಿರುಕುಳ ನೀಡಿದ್ದಾರೆ. ವೇತನವಿಲ್ಲದೆ ಕೆಲಸ ಮಾಡಲು ಒತ್ತಾಯಿಸಿದ್ದಾರೆ ಎಂದು ಚಿಕ್ಕೂಸಾ ನಾಯಕ್ ತಮ್ಮ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಮೋಹಕುಮಾರ್ ಮತ್ತು ರಾಮೇಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪಿಡಿಒ ಅವರೇ ಎಲ್ಲ ಅಧಿಕಾರವನ್ನು ಹೊಂದಿದ್ದು, ಈ ಪರಿಸ್ಥಿತಿಗೆ ಅವರೇ ಕಾರಣರಾಗಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸನಾತನಿಗಳ ಸಹವಾಸದಿಂದ ದೂರ ಇರಿ; RSS, ಸಂಘ ಪರಿವಾರದ ಬಗ್ಗೆ ಜಾಗರೂಕರಾಗಿರಿ: ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ

BBK12: ರಕ್ಷಿತಾ ಶೆಟ್ಟಿಗೆ S*** ಪದ ಬಳಸಿದ್ದೇಕೆ ಅಶ್ವಿನಿ ಗೌಡ; ಸ್ಪರ್ಧಿಗಳ ಮುಖವಾಡ ಕಳಚಿದ ಸುದೀಪ್, Video!

ಮಣಿಕಂಠ ರಾಥೋಡ್ ಬಹಿರಂಗ ಬೆದರಿಕೆ! ಬಿಜೆಪಿ ನಾಯಕರಿಗೆ 'ಸವಾಲು' ಹಾಕಿದ ಪ್ರಿಯಾಂಕ್ ಖರ್ಗೆ!

ಜಾರ್ಖಂಡ್: 'ಮಿತಿ ಮೀರಬೇಡಿ, ನ್ಯಾಯಾಂಗದ ಬಗ್ಗೆ ದೇಶ ಹೊತ್ತಿ ಉರೀತಿದೆ'; ಹೈಕೋರ್ಟ್ ಜಡ್ಜ್ ಗೇ ಝಾಡಿಸಿದ ವಕೀಲ! Video

ದೀಪಾವಳಿಗೆ ನಿಮ್ಮ ಕುಟುಂಬ, ಸ್ನೇಹಿತರಿಗೆ FASTag ವಾರ್ಷಿಕ ಪಾಸ್ ಗಿಫ್ಟ್ ನೀಡಿ!

SCROLL FOR NEXT