ಹೊಂಗನೂರು ಗ್ರಾಮ ಪಂಚಾಯಿತಿ ಕಾರ್ಯಾಲಯ 
ರಾಜ್ಯ

ಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲೇ 'ವಾಟರ್ ಮ್ಯಾನ್' ಆತ್ಮಹತ್ಯೆ!

ಹಲವು ಬಾರಿ ಮನವಿ ಮಾಡಿದರೂ ಪಂಚಾಯಿತಿ ಅಧ್ಯಕ್ಷೆಯ ಪತಿ ಮೋಹನ್‌ಕುಮಾರ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮೇಗೌಡ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು 27 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಚಾಮರಾಜನಗರ: ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಕಿರುಕುಳ ಹಾಗೂ 27 ತಿಂಗಳಿಂದ ಸಂಬಳ ಸಿಗದೆ ಮನನೊಂದ 'ವಾಟರ್ ಮ್ಯಾನ್' ಪಂಚಾಯಿತಿ ಕಚೇರಿಯ ಕಿಟಕಿ ಗ್ರಿಲ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹೊಂಗನೂರಿನಲ್ಲಿ ನಡೆದಿದೆ.

ಮೃತರನ್ನು ಚಿಕ್ಕೂಸಾ ನಾಯಕ್ ಎಂದು ಗುರುತಿಸಲಾಗಿದೆ. ಒಂಬತ್ತು ವರ್ಷಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿದ್ದ ಅವರಿಗೆ ಮೂವರು ಮಕ್ಕಳಿದ್ದಾರೆ.

ಹಲವು ಬಾರಿ ಮನವಿ ಮಾಡಿದರೂ ಪಂಚಾಯಿತಿ ಅಧ್ಯಕ್ಷೆಯ ಪತಿ ಮೋಹನ್‌ಕುಮಾರ್‌, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮೇಗೌಡ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು 27 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಮೋಹನ್ ಕುಮಾರ್ ಮತ್ತು ರಾಮೇಗೌಡ ಕಿರುಕುಳ ನೀಡಿದ್ದಾರೆ. ವೇತನವಿಲ್ಲದೆ ಕೆಲಸ ಮಾಡಲು ಒತ್ತಾಯಿಸಿದ್ದಾರೆ ಎಂದು ಚಿಕ್ಕೂಸಾ ನಾಯಕ್ ತಮ್ಮ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಮೋಹಕುಮಾರ್ ಮತ್ತು ರಾಮೇಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪಿಡಿಒ ಅವರೇ ಎಲ್ಲ ಅಧಿಕಾರವನ್ನು ಹೊಂದಿದ್ದು, ಈ ಪರಿಸ್ಥಿತಿಗೆ ಅವರೇ ಕಾರಣರಾಗಿದ್ದಾರೆ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ತಿರುವನಂತಪುರಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಶಶಿ ತರೂರ್ ಹೊಗಳಿದ್ದು ಯಾರನ್ನ?

2026 ಬಂಗಾಳ ಚುನಾವಣೆ ಮೇಲೆ ಬದಲಾದ ಧರ್ಮ ರಾಜಕೀಯದ ಪರಿಣಾಮ ಏನು? ದೀದಿ ಜಾತ್ಯತೀತ ತಂತ್ರ ಬುಡಮೇಲು?

ಪಾಕಿಸ್ತಾನಕ್ಕೆ ಭಾರತದ ಸೂಕ್ಷ್ಮ ಮಾಹಿತಿ ಸೋರಿಕೆ: ಅಸ್ಸಾಂ ನಲ್ಲಿ ವಾಯುಪಡೆಯ ನಿವೃತ್ತ ಅಧಿಕಾರಿ, ಕಾಶ್ಮೀರಿಗಳ ಬಂಧನ

CM ಕುರ್ಚಿ ಗುದ್ದಾಟ: ಪರಮೇಶ್ವರ್ ಮುಖ್ಯಮಂತ್ರಿ ಆಗಲಿ; ತನ್ನ 'ಗೆಲುವಿನ ಗುಟ್ಟು' ರಟ್ಟು ಮಾಡಿದ ಸೋಮಣ್ಣ! Video

ಇಕ್ಬಾಲ್ ಹುಸೇನ್ ಮಾತು ನಂಬಬೇಡಿ, ಅವನಿಗೆ ಮಾತಾಡೋ ಚಟ: 'ಮಾನಸಪುತ್ರ'ನ ವಿರುದ್ಧ ಡಿಕೆಶಿ ಸಿಡಿಮಿಡಿ

SCROLL FOR NEXT