ಬಂಧಿತ ಆರೋಪಿಗಳು 
ರಾಜ್ಯ

ಬೆಂಗಳೂರು: ಮಹಿಳೆಯ ಬೆರಳು ಕತ್ತರಿಸಿ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರ ಬಂಧನ

ಸೆ.13ರಂದು ದೂರುದಾರ ಮಹಿಳೆ ಉಷಾ ಹಾಗೂ ಸ್ನೇಹಿತೆ ವರಲಕ್ಷ್ಮೀ ಎಂಬವರು ಗಣೇಶ ಹಬ್ಬದ ಆರ್ಕೆಸ್ಟ್ರಾ ಮುಗಿಸಿ ಮನೆಗೆ ವಾಪಸ್ ಆಗುವಾಗ ಪಲ್ಸರ್ ಬೈಕ್​ನಲ್ಲಿ ಬಂದ ದುರುಳರು ಮಚ್ಚು ತೋರಿಸಿದ್ಧಾರೆ.

ಬೆಂಗಳೂರು: ಆರ್ಕೆಸ್ಟ್ರಾ ನೋಡಿಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ, ಲಾಂಗ್‌ನಿಂದ ಹಲ್ಲೆ ಮಾಡಿ, ಸರಗಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಯೋಗಾನಂದ (35) ಹಾಗೂ ಈತನ ಸಹಚರ ಪ್ರವೀಣ್ ಬಂಧಿತರು. ಇವರಿಂದ 80 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ.ಜಗಲಾಸರ್ ಅವರು ಪ್ರಕರಣದ ಕುರಿತು ಮಾಹಿತಿ ನೀಡಿದರು.

ಸೆ.13ರಂದು ದೂರುದಾರ ಮಹಿಳೆ ಉಷಾ ಹಾಗೂ ಸ್ನೇಹಿತೆ ವರಲಕ್ಷ್ಮೀ ಎಂಬವರು ಗಣೇಶ ಹಬ್ಬದ ಆರ್ಕೆಸ್ಟ್ರಾ ಮುಗಿಸಿ ಮನೆಗೆ ವಾಪಸ್ ಆಗುವಾಗ ಪಲ್ಸರ್ ಬೈಕ್​ನಲ್ಲಿ ಬಂದ ದುರುಳರು ಮಚ್ಚು ತೋರಿಸಿದ್ಧಾರೆ. ಗಾಬರಿಗೊಂಡ ಉಷಾ ಸರ ನೀಡಿದರೆ, ವರಲಕ್ಷ್ಮಿ ಅವರು ಪ್ರತಿರೋಧ ತೋರಿಸಿದ್ದು ಮಚ್ಚಿನಿಂದ ಹಲ್ಲೆ ಮಾಡಿದ್ದರು. ಈ ವೇಳೆ ಅವರ, ಕೈ ಬೆರಳು ತುಂಡಾಗಿತ್ತು.

ಅದೇ ದಿನ ಕುಮಾರಸ್ವಾಮಿ ಲೇಔಟ್ ಹಾಗೂ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: ಇಶಾನ್ ಕಿಶನ್ ವೇಗದ ಅರ್ಧ ಶತಕ; ಪಾಕ್‌ಗೆ 176 ರನ್ ಟಾರ್ಗೆಟ್ ಫಿಕ್ಸ್ ಮಾಡಿದ ಭಾರತ!

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರೆಹಮಾನ್ ಪದಗ್ರಹಣ ಕಾರ್ಯಕ್ರಮ ಆಹ್ವಾನಕ್ಕೆ ಭಾರತದ ಒಪ್ಪಿಗೆ; ಬಾಂಗ್ಲಾಗೆ ತೆರಳಲಿರುವ ಭಾರತದ ಪ್ರತಿನಿಧಿ ಯಾರು?

T20 World Cup 2026: 27 ಬಾಲ್ ಗಳಲ್ಲಿ ಅರ್ಧಶತಕ ಹೊಡೆದು, ಭಾರತದ ಸ್ಕೋರ್ ಹೆಚ್ಚಿಸಿದ ಇಶಾನ್ ಕಿಶಾನ್!

T20 World Cup: ನೋ ಹ್ಯಾಂಡ್ ಶೇಕ್; ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ, ಭಾರತ ತಂಡದಲ್ಲಿ ಎರಡು ಬದಲಾವಣೆ!

SCROLL FOR NEXT